ಕೂಡಲೇ ನೂತನ ರಸ್ತೆ ನಿರ್ಮಾಣ ಮಾಡಲು ಮನವಿ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ರಸ್ತೆಯು ಸಂಪೂರ್ಣ ಹದಗೆಟ್ಟ ಪರಿಣಾಮ ಮೊನ್ನೆ ಕಲಬುರಗಿಯಿಂದ ಬಸವಕಲ್ಯಾಣಕ್ಕೆ ಚಲಿಸುತ್ತಿರುವ ಸರ್ಕಾರಿ ಬಸ್ ರಸ್ತೆ ಕೆಳಗಡೆ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆ ಸೇರಿದ್ದಾರೆ ಎಂದು ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಆರೋಪ ಮಾಡಿದೆ.
ಈ ಕುರಿತು ಮುಡಬಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಿಂತು ಮಾತನಾಡಿದ ತಾಲೂಕು ಅಧ್ಯಕ್ಷ ಮಾಂತೇಶ್ ಗೌರಕರ ಅವರು ಮುಡಬಿ ಗ್ರಾಮವು ಬಸವಕಲ್ಯಾಣ ತಾಲೂಕಿನ ಹೋಬಳಿ ಗ್ರಾಮವಾಗಿದ್ದು ಹಲವು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಹೊಂದಿವೆ ಆದರೆ ಹಲವು ವರ್ಷಗಳಿಂದ ಮುಖ್ಯ ರಸ್ತೆಗಳು ಹದಗೆಟ್ಟು ಅಪಘಾತ ಸಂವಿಸುತ್ತಿದ್ದರು ಇಲ್ಲಿನ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದೆ, ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ವಾಹನ ಚಲಿಸುವ ಪರಸ್ಥಿತಿ ನಿರ್ಮಾಣವಾಗಿದೆ ಮುಡಬಿ ಗ್ರಾಮವನ್ನು ತಾಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಅಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಲೆ, ಆಸ್ಪತ್ರೆ , ನೆಮ್ಮದಿ ಕೇಂದ್ರಗಳಿಗೆ ಹೋಗಲು ಸೂಕ್ತ ರಸ್ತೆಗಳಿಲ್ಲ ಕೂಡಲೇ ಇಲ್ಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಬರುವ 15 ದಿನಗಳ ಒಳಗೇ ಮೂಡಬಿ ಗ್ರಾಮ ಮುಖ್ಯ ರಸ್ತೆಗಳು ಸೇರಿ ಓಣಿಯ ರಸ್ತೆಗಳು ನೂತನವಾಗಿ ನಿರ್ಮಾಣ ಮಾಡಬೇಕು ಇಲ್ಲದಿದ್ದರೆ ನಮ್ಮ ಕರವೇ ಸಂಘಟನೆಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ವರದಿ ಶ್ರೀನಿವಾಸ ಬಿರಾದಾರ




















