ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫೋಟೊಗ್ರಾಫರ್ಸ್, ವಿಡಿಯೊಗ್ರಾಫರ್‌ಗಳಿಗೆ ಕಾರ್ಮಿಕ ಇಲಾಖೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ : ಅಧ್ಯಕ್ಷ ಜಗದೀಶಗೌಡ

ಬಳ್ಳಾರಿ / ಕಂಪ್ಲಿ : ಸರಕಾರ ಫೋಟೊಗ್ರಾಫರ್ಸ್, ವಿಡಿಯೊಗ್ರಾಫರ್‌ಗಳಿಗೆ ಕಾರ್ಮಿಕ ಇಲಾಖೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಾಲೂಕು ಫೋಟೊಗ್ರಾಫರ್ಸ್ ಮತ್ತು ವಿಡಿಯೊಗ್ರಾಫರ್ಸ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ಅಧ್ಯಕ್ಷರಾದ ಜಗದೀಶಗೌಡ ಅವರು ಸರ್ಕಾರಕ್ಕೆ ಪ್ರಮುಖವಾಗಿ ಒತ್ತಾಯಿಸಿದ್ದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ವಿಶ್ವ ಛಾಯಾಗ್ರಾಹಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕಾರ್ಮಿಕ ಇಲಾಖೆಯ ವತಿಯಿಂದ ಸಿಗುವ ಆರೋಗ್ಯ ವಿಮೆ, ಅಪಘಾತ ವಿಮೆ, ಮತ್ತು ಪಿಂಚಣಿ ಯೋಜನೆಗಳು ಎಲ್ಲರಿಗೂ ತಲುಪಬೇಕು. ವೃತ್ತಿಪರ ಛಾಯಾಗ್ರಾಹಕರಿಗೆ ಸರ್ಕಾರದಿಂದ ಅಧಿಕೃತ ಸ್ಮಾರ್ಟ್ ಕಾರ್ಡ್ ಅಥವಾ ಲೇಬರ್ ಕಾರ್ಡ್ ವಿತರಿಸಲು ಅಭಿಯಾನ ಹಮ್ಮಿಕೊಳ್ಳಬೇಕು. ಸೀಸನ್ ಇಲ್ಲದ ಸಮಯದಲ್ಲಿ ಅಥವಾ ತುರ್ತು ಸಂದರ್ಭಗಳಲ್ಲಿ ಸಾಲ ಸೌಲಭ್ಯ ಹಾಗೂ ಆರ್ಥಿಕ ನೆರವು ಒದಗಿಸಬೇಕು. ವಸತಿ ಸೌಲಭ್ಯ ಸೇರಿದಂತೆ ಇತರೆ ಸವಲತ್ತುಗಳನ್ನು ನೀಡವ ನಿಟ್ಟಿನಲ್ಲಿ ಶಾಸಕರು, ಆಡಳಿತ ಪುರಸಭೆ ಆಸಕ್ತಿ ವಹಿಸಬೇಕು,” ಎಂದರು.

ಇದಕ್ಕೂ ಮೊದಲು ಉದ್ಭವ ಗಣಪತಿ ದೇಗುಲದಿಂದ ಎಪಿಎಂಸಿ ವರೆಗೆ ಮೆರವಣಿಗೆ ನಡೆಯಿತು. ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಜಿ.ಎಚ್.ಶಶಿಧರ, ಎಸ್. ಶ್ರೀನಿವಾಸರೆಡ್ಡಿ, ಇಲಿಯಾಜ್, ಶಿವಕುಮಾರ್, ಎಮ್ಮಿಗನೂರು ಬಸವರಾಜ, ಎಚ್.ಎಸ್.ವೀರೇಶ್, ತಿಪ್ಪೇಸ್ವಾಮಿ, ವೀರನಗೌಡ, ಪ್ರಮೋದ್ ಕುಮಾರ್ ಸೇರಿ ತಾಲೂಕಿನ ಫೋಟೊಗ್ರಾಫರ್, ವಿಡಿಯೊಗ್ರಾಫರ್ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!