ಬೆಂಗಳೂರು: ಕ್ವೀನ್ಸ್ ಗ್ಲೋಬಲ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕಿ, ಎಪ್ ಕೆ ಸಿ ಸಿ ಎ ಇದರ ನಿರ್ದೇಶಕಿ ಮತ್ತು ರೋಟರಿ ಬೆಂಗಳೂರು ಮಾಜಿ ಅಧ್ಯಕ್ಷೆ ಗೀತಾ ಮಧುರಾಣಿ ಗೌಡ ಇವರಿಗೆ ವಿಶ್ರಾಂತ ಐಎಎಸ್ ಅಧಿಕಾರಿ ಶ್ರೀ ಶಂಕರ್ ಅಧ್ಯಕ್ಷತೆಯಲ್ಲಿ “ಹಂಸ ಸಮ್ಮಾನ್” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದ ಹಂಸಜ್ಯೋತಿ ಟ್ರಸ್ಟ್ನ ಸುವರ್ಣ ಮಹೋತ್ಸವ ಸಮಾರಂಭದ ಸಂದರ್ಭದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ನಾಡೋಜ ವುಡೆ ಪಿ ಕೃಷ್ಣ, ಗೌರವ ಕಾರ್ಯದರ್ಶಿ – ಶೇಷಾದ್ರಿಪುರಂ ಎಜುಕೇಷನಲ್ ಟ್ರಸ್ಟ್ ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಡಾ. ಮಧುರಾಣಿ ಗೌಡ ಅವರಿಗೆ ಈ ಸಂದರ್ಭದಲ್ಲಿ ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಅಭಿನಂದಿಸಿದ್ದಾರೆ.




















