ಕೊಳ್ಳೇಗಾಲ: ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿಯ ನಾಮ ನಿರ್ದೇಶರಾಗಿ ನಿಯೋಜನೆಗೊಂಡಿರುವ ಸದಸ್ಯರುಗಳು ಮಂಗಳವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ರವರನ್ನು ಸನ್ಮಾನಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ನಾಮ ನಿರ್ದೇಶಿತ ಸದಸ್ಯರಾದ ಸಿದ್ದಾರ್ಥ ಕೆ.ಎಂ. ಹಾಗೂ ಹೇಮಂತಕುಮಾರ್ ರವರು ಸನ್ಮಾನಿಸಿ ಅಭಿನಂದಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಕ್ಕೆ ಮುಂದಿನ ಮೂರು ವರ್ಷಗಳ ಕಾಲಾವಧಿಗೆ ನೇಮಕವಾಗಿರುವವರಿಗೆ ಅಭಿನಂದನೆ ಸಲ್ಲಿಸಿ, ನಿಮ್ಮ ಅವಧಿಯಲ್ಲಿ ಎಸ್ ಪಿ ಮತ್ತು ಎಸ್ಟಿ ಜನರ ಅಭಿವೃದ್ಧಿಗೊಳಿಸುವ ಮೂಲಕ ಬಡಜನರ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಬಸ್ತೀಪುರ ರವಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಕಾರ್ಯದರ್ಶಿ ಪಾಪಣ್ಣ, ಮುಖಂಡ ಪಿ.ಕೃಷ್ಣರಾಜ್, ನಟರಾಜು, ಮುಳ್ಳೂರು ಪ್ರಸಾದ್, ರಮೇಶ್ ಹಾಗೂ ಇತರರು ಇದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು




















