ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆರೋಗ್ಯ ಇಲಾಖೆ ಹೆಬ್ಬಾಲೆ ಮತ್ತು ಗ್ರಾಮ ಪಂಚಾಯಿತಿ ಹೆಬ್ಬಾಲೆಯ ವತಿಯಿಂದ ಸಾರ್ವಜನಿಕರಲ್ಲಿ ವಿಶೇಷ ಮನವಿ ಇತ್ತೀಚಿನ ದಿನಗಳಲ್ಲಿ, ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಸ್ಸು ನಿಲ್ದಾಣಗಳ ಬಳಿ, ಅಂಗಡಿ ಮುಂಗಟ್ಟುಗಳಲ್ಲಿ, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ,ನಾಯಿಗಳಿಗೆ ತಿಂಡಿ ತಿನಿಸುಗಳನ್ನು ಹಾಕಬಾರದು, ನಾಯಿಗಳ ಹತ್ತಿರ ಹೋಗಬಾರದು, ಜೊಲ್ಲು ಸುರಿಸುತ್ತಿರುವ ನಾಯಿಗಳು ಕಂಡು ಬಂದರೆ ತಕ್ಷಣ ಗ್ರಾಮ ಪಂಚಾಯಿತಿಗೆ ತಿಳಿಸಬೇಕು ಹಾಗೂ ನಾಯಿಗಳನ್ನು ಸಾಕುತ್ತಿರುವ ಮಾಲೀಕರು ಸಹ ಬೀದಿಬೀದಿಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳನ್ನು ಬಿಡಬಾರದು, ಹಾಗೂ ಸಾಕು ನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ರೇಬಿಸ್ ರೋಗವನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಈ ಮೂಲಕ ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರವಿ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆಯ ಆರೋಗ್ಯ ನಿರೀಕ್ಷಕ ಸಂಜಯ್ ಮತ್ತು ಪಶು ವೈದ್ಯರಾದ ಡಾಕ್ಟರ್ ಅಮೃತಾ ರವರು ಮನವಿ ಮಾಡಿದರು. ಹಾಗೂ ಹೆಬ್ಬಾಲೆ ಗ್ರಾಮದ ಬೀದಿಗಳಲ್ಲಿ ಸಾರ್ವಜನಿಕರು ನಾಯಿ ಕಡಿತದಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಬಗ್ಗೆ ಮೈಕ್ ಮೂಲಕ ಪ್ರಚಾರ ಮಾಡಲಾಯಿತು.
- ಕರುನಾಡ ಕಂದ ಸುದ್ದಿ




















