ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೆದ್ದಾರಿ ತಡೆದು ಪ್ರತಿಭಟನೆ

ಬೀದರ್ ಜಿಲ್ಲೆಯ ಔರಾದ್ ಹಾಗೂ ಕಮಲಾ ನಗರ ಎರಡೂ ತಾಲೂಕನ್ನು ಬರಪೀಡಿತ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೈನ್ಯ ವತಿಯಿಂದ ಇತ್ತೀಚೆಗೆ ಪಟ್ಟಣದ ಎಪಿಎಂಸಿ ವೃತ್ತದಲ್ಲಿ ಬೀದರ್ ನಾಂದೇಡ್ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ತಹಸೀಲ್ದಾರ್ ಮಹೇಶ್ ಪಾಟೀಲ್ ಅವರ ಮೂಲಕ ಮನವಿ ಸಲ್ಲಿಸಿದರು.
ಮುಂಗಾರು ಹಂಗಾಮು ಆರಂಭವಾದ ದಿನದಿಂದ ಇಲ್ಲಿಯವರೆಗೆ ವಾಡಿಕೆಯಂತೆ ಮಳೆ ಆಗದ ಕಾರಣ ಬೆಳೆಗಳು ಒಣಗುತ್ತಿವೆ ಎಂದು ದೂರಿದರು. ಆಗಸ್ಟ್ ಮೊದಲ ವಾರದ ಬಿತ್ತನೆ ಬೆಳೆಗಳು ಮಳೆ ಕೊರತೆಯಿಂದ ಒಣಗುತ್ತಿರುವುದರಿಂದ ರೈತರು ತೀವ್ರ ಸಂಕಷ್ಟ ಸಿಲುಕಿದರೆಂದು ಮನವಿಯಲ್ಲಿ ತಿಳಿಸಲಾಗಿದೆ ಸರ್ಕಾರ ಕೂಡಲೇ ಕಮಲನಗರ ಮತ್ತು ಔರಾದ ತಾಲೂಕುಗಳನ್ನು ಬರಪೀಡಿತ ತಾಲ್ಲೂಕುಗಳನ್ನಾಗಿ ಘೋಷಿಸಬೇಕು, ಪ್ರತಿ ಎಕರೆಗೆ ಬರ ಪರಿಹಾರ ನೀಡುವುದರ ಜೊತೆ ರೈತರ ಸಾಲಮನ್ನಾ ಮಾಡಬೇಕು ಎಂದು ರೈತ ಸಂಘದ ಆಗ್ರಹಿಸಿದೆ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರಕಾರ ತುತು೯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರು, ಜಾನುವಾರು ಹಾಗೂ ಎತ್ತಿನ ಬಂಡಿಗಳೊಂದಿಗೆ ರಸ್ತೆಗಳಿಗೆ ಇಳಿದು ಉಗ್ರ ಹೋರಾಟ ನಡೆಸಲಾಗುವುದು ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರೈತರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ್, ತಾಲೂಕ ಅಧ್ಯಕ್ಷ ಪ್ರಕಾಶ್ ಬಾವಗೆ , ಕಾರ್ಯದರ್ಶಿ ಸಂಜು ರೆಡ್ಡಿ ಗೌರವಾಧ್ಯಕ್ಷ ಸತ್ಯವಾನ ಪಾಟೀಲ್ ಬಾಬು ಜಗದ ಕಲ್ಲಪ್ಪ ದೇಶಮುಖ ಝರಣಪ್ಪ ದೇಶಮುಖ್ ರಾಜಹo ಸಿ ಶೆಟ್ಕರ್ ವಿಜಯ್ ಕುಮಾರ್ ಶೆಟ್ಟಿ ಕಾರ್ ಶಿವನoದ ಹಂಗರಗಿ ಗೋವಿಂದ ಇಂಗಳ ಪ್ರಶಾಂತ್ ಖಾನಾಪುರ ಗೋವಿಂದ ಲೋಣಿ ಸೇರಿದಂತೆ ತಾಲೂಕಿನ ರೈತರು ಉಪಸ್ಥಿತರಿದ್ದರು.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!