
ಬಳ್ಳಾರಿ / ಕಂಪ್ಲಿ : ಭಾದ್ರಪದ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ದೇವಸ್ಥಾನಗಳಲ್ಲಿ ಭಜನೆ, ವಿಶೇಷ ಪೂಜೆ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಶ್ರದ್ದಾಭಕ್ತಿಯಿಂದ ಶುಕ್ರವಾರ ನೆರವೇರಿದವು.
ಸ್ಥಳೀಯ ಐತಿಹಾಸಿಕ ಸೋಮಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಗಳು ಶಾಶ್ತೋತ್ರವಾಗಿ ನಡೆದವು. ಇಲ್ಲಿನ ಸೋಮಪ್ಪ ದೇವಸ್ಥಾನದಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿ, ಭಕ್ತರು ಕಾಯಿ, ಕರ್ಪೂರ ಅರ್ಪಿಸಿ, ದೇವರ ದರ್ಶನ ಪಡೆದು ಪುನೀರಾದರು. ಮತ್ತು ಇಷ್ಟಾರ್ಥ ಸಿದ್ಧಿಗಾಗಿ ಬೇಡಿದರು. ನಂತರ ಪ್ರಸಾದ ಸ್ವೀಕರಿಸಿದರು.
ಇಲ್ಲಿನ ಪೇಟೆ ಬಸವೇಶ್ವರ, ಗ್ರಾಮ ದೇವತೆ ಮಾರೆಮ್ಮ, ಆಂಜನೇಯ, ಕಂಪ್ಲಿ-ಕೋಟೆಯ ಐತಿಹಾಸಿಕ ಪಂಪಾಪತಿ ದೇವಸ್ಥಾನ, ಸಕ್ಕರೆ ಕಾರ್ಖಾನೆಯ ಕಾಳಿಕಾ ದೇವಸ್ಥಾನ ಸೇರಿದಂತೆ ನಾನಾ ಭಾಗದಲ್ಲಿರುವ ದೇವಸ್ಥಾನದಲ್ಲಿ ಶ್ರಾವಣಮಾಸದ ಭಾದ್ರಪದ ಅಮಾವಾಸ್ಯೆಯ ದಿನದಂದಯ ಧಾರ್ಮಿಕ ಕೈಂಕರ್ಯಗಳನ್ನು ಶ್ರದ್ಧೆಯಿಂದ ಪೂರೈಯಿಸಿದರು. ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ರಾಯತ ಮೃತ್ತಿಕಾ ಬೃಂದಾವನವನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಿದರು. ತಾಲೂಕಿನ ಸಣಾಪುರದ ಉದ್ಭವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಲಂಕಾರ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ಪೂಜಾ ಪುನಸ್ಕಾರಗಳು ಭಕ್ತರು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದವು. ತದನಂತರ ಅನ್ನ ಸಂತಾರ್ಪಣೆ ಏರ್ಪಡಿಸಲಾಗಿತ್ತು. ಸಮೀಪದ ಬುಕ್ಕಸಾಗರದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ಅಮಾವಾಸ್ಯೆ ನಿಮಿತ್ಯ ನಾಗಪ್ಪ ದೇವರಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ದರ್ಶನ ಪಡೆದುಕೊಂಡರು.
ವರದಿ : ಜಿಲಾನಸಾಬ್ ಬಡಿಗೇರ್




















