ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಸರ್ಕಾರ ಹೆಸರಿಗೆ ಮಾತ್ರ ಡಬಲ್ ಇಂಜಿನ್ ಸರ್ಕಾರ ಡಾ. ಪ್ರಭುಗೌಡ ಲಿಂಗದಳ್ಳಿ…!

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ವಾರ್ಡ್ ನಂಬರ್ 12ರಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಯುತ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ,ಕೇಂದ್ರ ಹಾಗೂ ರಾಜ್ಯದಲ್ಲಿ ಎರಡು ಕಡೆ ಡಬಲ್ ಇಂಜಿನ್ ಸರ್ಕಾರ ಇದ್ದರು.ಹೆಸರಿಗೆ ಡಬಲ್ ಇಂಜಿನ್ ಸರ್ಕಾರ ಈ ಡಬಲ್ ಇಂಜಿನ್ ಸರ್ಕಾರದಿಂದ ಭ್ರಷ್ಟಾಚಾರ ಡಬಲ ಆಗಿದೆ ಹಾಗೂ ಬರೀ ಡಬಲ್ ಅಲ್ಲ ನಾಲ್ಕೈದು ಪಟ್ಟು ಹೆಚ್ಚಾಗಿದೆ ಬಿಜೆಪಿಯವರ ಸುಳ್ಳು ಭರವಸೆಯಿಂದ ನೀವು ಮರಳಾಗಬೇಡಿ ಎಂದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಕಿವಿಮಾತು ಹೇಳುವುದರ ಮುಖಾಂತರ ಬಿಜೆಪಿ ವಿರುದ್ಧ ಕಿಡಿ ಕಾರಿದರು.ಕಾಂಗ್ರೆಸ ನವರು ಮಹಾತ್ಮ ಗಾಂಧೀಜಿಯವರನ್ನು ಪೂಜಿಸುತ್ತಾರೆ,ಆದರೆ ಬಿಜೆಪಿಯವರು ಮಹಾತ್ಮ ಗಾಂಧೀಜಿಯವರನ್ನು ಕೊಂದ (ನಾತೋರಾಂ ಗೋಡ್ಸೆ) ಅವರನ್ನು ಪೂಜಿಸುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಮುಖಂಡರಾದ ಡಾ.ಪ್ರಭುಗೌಡ ಲಿಂಗದಳ್ಳಿ ಅವರ ಸಮ್ಮುಖದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಯುವ ಕಾರ್ಯಕರ್ತರು ಸೇರ್ಪಡೆಗೊಂಡರು..

ಇದೇ ಸಂದರ್ಭದಲ್ಲಿ ದೇವರ
ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರ್ ಅಹಮದ್ ಬೇಪಾರಿ,ಯೂತ್ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಸಂತೋಷ್ ದೊಡ್ಡಮನಿ, ಹೂವಿನಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಜಾ ನದಾಫ್, ಗೌರಮ್ಮಮುತ್ತತ್ತಿ, ಪ್ರಕಾಶ್ ಗುಡಿಮನಿ, ಶಂಕರಗೌಡ ಪಾಟೀಲ್, ಶಬ್ಬೀರ್ ಮುಲ್ಲಾ, ಮಕ್ಬುಲ್ ಭಾಗವಾನ್, ಬಾಳಾಸಾಬಗೌಡ ಪಾಟೀಲ, ಅಶೋಕಗೌಡ ಕುದರಿಸಾಲವಾಡಗಿ, ಡಾ. ಗುರುರಾಜ್ ಗಡೆದ, ಮುರ್ತುಜ್ ತಾಂಬೋಳಿ, ಸುನಿಲ ಕನಮಡಿ,ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ‌. ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ