ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆಯಾಗಿ ಬೋರಮ್ಮ ಪತಂಗಿ ಆಯ್ಕೆ

ಉಪಾಧ್ಯಕ್ಷೆಯಾಗಿ ಪ್ರತಿಭಾ ತೊರವಿ ಹಾಗೂ ಪ್ರಧಾನಿ ಕಾರ್ಯದರ್ಶಿಯಾಗಿ ಸಚಿನ್ ಗಡಿಬಿಡಿ ನೇಮಕ

ವಿಜಯಪುರ/ ಕೊಲ್ಹಾರ : ಕೆನೆ ಮೊಸರಿನ ಕಣಜ ಕೊಲ್ಹಾರ ತಾಲೂಕಿನ ಕರುನಾಡು ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷೆಯಾಗಿ ತಾಲೂಕಿನ ಲೇಖಕಿ ಬೋರಮ್ಮ ಪತಂಗಿ ಅವರು ಆಯ್ಕೆಯಾಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರತಂದಿರುವ ಇವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬರವಣಿಗೆಯ ಮೂಲಕ ಸಾಹಿತ್ಯ ವಲಯದಲ್ಲಿ ಚಿರಪರಿಚಿತರಾಗಿದ್ದಾರೆ. ಇವರು ಅನೇಕ ಹಿರಿಯ ಕಿರಿಯ ಸಾಹಿತಿಗಳ ಒಡನಾಟದಲ್ಲಿದ್ದು ಈಗ ಕರುನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
ಅದರಂತೆಯೇ ತಾಲೂಕಿನ ಇನ್ನೋರ್ವ ಕ್ರಿಯಾಶೀಲ ಬರಹಗಾರ್ತಿ ಹಾಗೂ ಶಿಕ್ಷಕಿ ಪ್ರತಿಭಾ ತೊರವಿ ಅವರನ್ನು ತಾಲೂಕಿನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪ್ರತಿಭಾ ಅವರು ಕೂಡ ಈಗಾಗಲೇ ತಮ್ಮ ಬರಹಗಳ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದು ಕರುನಾಡು ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ಜೈನಾಪೂರದ ಕ್ರಿಯಾಶೀಲ ಶಿಕ್ಷಕ ಸಚಿನ್ ಗಡಿಬಿಡಿಯವರು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ವಿಜಯಪುರ ಜಿಲ್ಲಾ ಎರಡನೇ ಕರುನಾಡು ಸಾಹಿತ್ಯೋವತ್ಸದಲ್ಲಿ ಕೊಲ್ಹಾರ ತಾಲೂಕಿನ ನೂತನ ಅಧ್ಯಕ್ಷರು ,ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಅಸ್ಲಂ ಶೇಖ ನರಸಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ