ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವನಬಾಗೇವಾಡಿ ಕ್ಷೇತ್ರದಲ್ಲಿ ಕೆ ಆರ್ ಎಸ್ ಗೆಲ್ಲಿಸಿ: ಎಂ ಎಲ್ ಎ ಅಭ್ಯರ್ಥಿ ಪ್ರವೀಣಕುಮಾರ ರಾಯಗೊಂಡ

ಬಸವನಬಾಗೇವಾಡಿ : ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕಾ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರವೀಣಕುಮಾರ ರಾಯಗೊಂಡ ಅವರ ಸಮ್ಮುಖದಲ್ಲಿ ಪಕ್ಷದ ಪತ್ರಿಕಾಗೋಷ್ಠಿ ನಡೆಯಿತು.
ಈ ವೇಳೆ ಮಾತನಾಡಿದ ಪ್ರವೀಣಕುಮಾರ ನಮ್ಮ ಪಕ್ಷ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಮತಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ, ಜಿಲ್ಲೆಯಲ್ಲಿ ವಿಜಯಪುರ ಜಿಲ್ಲಾಧ್ಯಕ್ಷರಾದ ಶಿವಾನಂದ ಯಡಹಳ್ಳಿ ಅವರ ನೇತೃತ್ವದಲ್ಲಿ ಪಕ್ಷದ ಬಲವರ್ಧನೆಯಾಗುತ್ತಿದೆ, ಈಗಾಗಲೇ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ಅವರು ಒಂಬತ್ತು ವಂಶಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಣಾಳಿಕೆ ಪೂರಕವಾಗಿದೆ, ಬಸವನಬಾಗೇವಾಡಿ ಕ್ಷೇತ್ರದಲ್ಲಿ ನಾನು ಈ ಬಾರಿ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ , ಕ್ಷೇತ್ರದ ಮತದಾರರು ನನಗೆ ಮತ ನೀಡುವ ಮೂಲಕ ನಮ್ಮ ಪ್ರಾಮಾಣಿಕ ಪಕ್ಷವನ್ನು ಆಯ್ಕೆ ಮಾಡುಬೇಕು, ಅಲ್ಲದೇ ದೀನ ದಲಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪಕ್ಷ ಬದ್ಧವಾಗಿದೆ, ಜೆಸಿಬಿ ಪಕ್ಷಗಳು ಕಮಿಷನ್ ದಂಧೆಯಲ್ಲಿ ತೊಡಗಿವೆ, ಈ ಬಾರಿ ಮತದಾರರು ಸ್ವಚ್ಛ ಪ್ರಾಮಾಣಿಕ ಹಾಗೂ ಜನಪರ ಆಡಳಿತ ನೀಡುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದರು.
ಈ ಸಂದರ್ಭದಲ್ಲಿ ನಾಗವಾಡ ಗ್ರಾಮದ ಘಟಕದ ಅಧ್ಯಕ್ಷ ಸಂತೋಷ್ ರಾಥೋಡ್, ಗೊಳಸಂಗಿ ಗ್ರಾಮದ ರಜಿಯಾ ಬಿಜಾಪುರ್, ಯಶೋಧಾ, ಮುತ್ತಗಿಯ ಮಲ್ಲನಗೌಡ ರಾಯಗೊಂಡ, ಮಣ್ಣೂರು ಗ್ರಾಮದ ಶ್ರೀಶೈಲ ಮಾದರ ಹಾಗೂ ಬಸವರಾಜ ಅವರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ