ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ

ಸಿಂಧನೂರು//ಎ.01. ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ (ಡಿ ಎಡ್ ಕಾಲೇಜು PWD ಕ್ಯಾಂಪ್) ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಉದ್ಘಾಟನೆ ಹಾಗೂ ನಡೆದಾಡುವ ದೇವರು ಶ್ರೀ ಶಿವಕುಮಾರ ಮಹಾಸ್ವಾಮಿಗಳ 116 ನೇ ಜಯಂತಿ ಕಾರ್ಯಕ್ರಮ ಪರಮ ಪೂಜ್ಯರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.
ಇಂದು ಬೆಳಗ್ಗೆ ಪರಮ ಪೂಜ್ಯರು ಪಕ್ಷಿಗಳಿಗೆ ಅರವಟ್ಟಿಗೆಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಶಿವಯೋಗಿಗಳ 116ನೇ ಜಯಂತಿಯ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ಮರು ಜೀವ ಪಡೆದ ಆಲದ ಮರದ ಹತ್ತಿರ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಿಂಧನೂರಿನ ಕಾಯಕ ಯೋಗಿಗಳಾದ ಚಂದ್ರಬಾಯಿ ಹಾಗೂ ಕಾಶಿನಾಥ ರಾಯಭಾಗಿ ಅವರಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ
ಪರಮ ಪೂಜ್ಯ ಸಿದ್ದರಾಮ ಮಹಾಸ್ವಾಮಿಗಳು,ಷ.ಬ್ರ.ಶ್ರೀ ಶಿವಯೋಗಿ ಶಿವಾಚಾರ್ಯರು ರೌಡಕುಂದ,ಮಾದಯ್ಯ ಗುರುವಿನ ಮಠ,ಪಾರ್ವತಿ ಅಮ್ಮನವರು,ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಅಮರೇಗೌಡ ವಕೀಲರು,ಡಾ.ಬಿ.ಎನ್.ಪಾಟೀಲ, ಡಾ. ಶರಣಬಸವ,ಅರಣ್ಯ ಅಧಿಕಾರಿ ರುದ್ರಮುನಿ, ಡಾ.ಚನ್ನಬಸವ ಹಾಗೂ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು,ಹಾಗೂ ಸನ್ ರೈಸ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಪತ್ರಿಕಾ ಮಾದ್ಯಮ ಮಿತ್ರರು, ವನಸಿರಿ ಫೌಂಡೇಶನ್ ಸದಸ್ಯರು,ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ