ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ಎಪ್ರಿಲ್ ಕೂಲ್ ಆಚರಣೆ ಶ್ಲಾಘನೀಯ:ಅರುಣಾ ಕುಮಾರಿ

ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ತಾವರಗೇರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಕಾರ್ಯಕ್ರಮ ನೆರವೇರಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜು ಪ್ರಾಂಶುಪಾಲರಾದ ಅರುಣಾ ಕುಮಾರಿ ಮೇಡಂ ಪಕ್ಷಿಗಳ ಅರವಟ್ಟಿಗೆಗೆ ನೀರು ಹಾಕಿ ಚಾಲನೆ ನೀಡಿ ಮಾತನಾಡಿದ ಅವರು ವನಸಿರಿ ಫೌಂಡೇಶನ್ ತಂಡ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ಸುಮಾರು ವರ್ಷಗಳಿಂದ ರಾಜ್ಯಾದ್ಯಂತ ಗಿಡಮರಗಳನ್ನು ನೆಟ್ಟು ಪೋಷಿಸಿ,ಇಡೀ ಕಲ್ಯಾಣ ಕರ್ನಾಟಕವನ್ನು ಹಸಿರುಕರಣ ಮಾಡುವಲ್ಲಿ ಬಹಳ ಶ್ರಮವಹಿಸುತ್ತಿದ ವನಸಿರಿ ತಂಡ ಬೇಸಿಗೆ ಕಾಲದಲ್ಲಿ ಪಕ್ಷಿಗಳ ಉಳಿವಿಗಾಗಿ ವಿನೂತನವಾಗಿ ಪಕ್ಷಿಗಳಿಗೆ ಎಪ್ರಿಲ್ ಕೂಲ್ ಮಾಡಲು ರಾಜ್ಯದ ಪರಿಸರ ಪ್ರೇಮಿಗಳಿಗೆ ಕರೆ ನೀಡಿರುವುದು ನಿಜಕ್ಕೂ ಶ್ಲಾಘನೀಯ ಈ ಕಾರ್ಯಕ್ರಮವನ್ನು ವನಸಿರಿ ತಂಡದ ಸದಸ್ಯರು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡಿರುವುದು ನಮಗೆ ತುಂಬಾ ಸಂತೋಷವಾಗುತ್ತಿದೆ ಈ ಕಾರ್ಯ ಹೀಗೆ ಮುಂದುವರೆಯಲಿ ಈ ವನಸಿರಿ ತಂಡಕ್ಕೆ ಯಾವಾಗಲೂ ಬೆಂಬಲವಾಗಿ ಇರುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಅರುಣ ಕುಮಾರಿ.ಟಿ ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೇವರಾಜ ಕಂಪ್ಯೂಟರ ಆಪರೇಟರ್,
ವನಸಿರಿ ಫೌಂಡೇಶನ್ ಸದಸ್ಯರಾದ ಶ್ರೀಧರ, ಭಾಷಾವಲಿ,ಲೋಹಿತ
ಮಣಿಕಂಠ,ವೀರೇಶ,ಜಮೀರ,ಮಹಮ್ಮದ,ಅಶೋಕ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ