ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ನೋಂದಣೆ ಕಡ್ಡಾಯವಾಗಿ ಮಾಡಿಸಿ ಪ.ಪಂ.ಮುಖ್ಯಾಧಿಕಾರಿ ಎ.ನಸ್ಸೂರುಲ್ಲಾ

ವಿಜಯನಗರ ಜಿಲ್ಲೆ ಕೊಟ್ಟೂರು;
ಜಿಲ್ಲಾಡಳಿತ ವಿಜಯನಗರ ಜಿಲ್ಲಾ ಪಂಚಾಯತಿ ವಿಜಯನಗರ ತಾಲೂಕ ಆಡಳಿತ ಕೊಟ್ಟೂರು ತಾಲೂಕ ಪಂಚಾಯತಿ ಕೊಟ್ಟೂರು ಪಟ್ಟಣ ಪಂಚಾಯಿತಿ ಕೊಟ್ಟೂರು ತಾಲೂಕ ಸ್ವೀಪ್ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಪಟ್ಟಣದ ಡಿಪಿಇಡಿ ಕಾಲೇಜ್ ವತಿಯಿಂದ ಉಜ್ಜಿನಿ ಸರ್ಕಲ್ ಕೊಟ್ಟೂರುವರೆಗೆ ಮತದಾನ ಜಾಗೃತಿ ಜಾಥಾವನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಾದ ಶ್ರೀ ನಸುರುಲ್ಲಾ ಮಾತನಾಡಿ ದಿನಾಂಕ 11ರಂದು ಮತದಾನ ನೊಂದಾವಣೆಗೆ ಕಡೆಯ ದಿನವಾಗಿದ್ದು ತಾಲೂಕಿನ ಜನತೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ನೋಂದಣಿಯನ್ನು ಮಾಡಿಸಿ ದಿನಾಂಕ 10.05.2023 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಯಶಸ್ವಿಗೆ ಕೈಜೋಡಿಸಬೇಕೆಂದು ತಿಳಿಸಿದರು. ಈ ಸಮಯದಲ್ಲಿ ತಾಲೂಕ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯಾದ ಶ್ರೀ ಶಶಿಧರ ಮೈದೂರು ಮಾತಾಡಿ 80 ವರ್ಷ ತುಂಬಿದ ವಯೋಮಾನದ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ನೀಡಿದ್ದು ಅದನ್ನು ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ತಿಳಿಸಿದರು ಈ ಸಮಯದಲ್ಲಿ ಬಿ ಎಲ್ ಓ ಗಳು ಹಾಗೂ ಸರ್ಕಾರಿ ನೌಕರ ಸಂಘದ ಸದಸ್ಯರಾದ ಜೆ. ಎಂ.ಮನೋಹರ ಸ್ವಾಮಿ ಶಿಕ್ಷಕರಾದ ವಿಠಲ್ ಕುಲಕರಣಿ ಸ್ವೀಪ್ ಸಮಿತಿಯ ಸದಸ್ಯರಾದ ಗೋಣಿಬಸಪ್ಪ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಜಾಥಾದಲ್ಲಿ
ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ