ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಂಜಿನ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಜಾಗೃತಿ

ಹರಪನಹಳ್ಳಿ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ತಾಲ್ಲೂಕಿನ ಎನ್ ಶೀರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು.
ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅಭ್ಯರ್ಥಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಹಾಲಪ್ಪ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ, ಮೇ 12ರಂದು ನಡೆಯವ ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜ್ಞಾವಂತ ಮತದಾರರು ತಪ್ಪದೆ ಮತದಾನ ಮಾಡಿ ಎಂದು ಸಲಹೆ ನೀಡಿದರು.
ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಗ್ರಾಮ ಪಂಚಾಯತಿ ಸದಸ್ಯರಾದ ಶಿವಕುಮಾರ, ಪ್ರಕಾಶ, ಮಲ್ಲಮ್ಮ ಮುರುಡೇಶ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಲಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀ ಮತಿ ನಾಗವೇಣಿ ಬಸವರಾಜ, ಗ್ರಾಮದ ಸಮಾಜ ಕಾರ್ಯ ಕರ್ತ ಕೆ ದಕ್ಷಿಣಮೂರ್ತಿ, ನಾಗರಾಜ ಹಾಗೂ ಗ್ರಾಮದ ಮುಖಂಡರು, ಯುವಕರು ಇದ್ದರು.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ