ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ರಘು ಆಚಾರ್”ಗೆ ಟಿಕೆಟ್ ನೀಡದ ಕಾಂಗ್ರೆಸ್ ವಿರುದ್ಧ ಹೋರಾಟಗಾರ “ತೇಜಸ್ವಿ ನಾಗಲಿಂಗ ಸ್ವಾಮಿ” ಅಸಮಾಧಾನ

ಮೈಸೂರು:ಯುವ ನಾಯಕ ರಘು ಆಚಾರ್ ರವರಿಗೆ ಚಿತ್ರದುರ್ಗ ದಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೆ ವಂಚಿಸಿದೆ ಎಂದು ಕನ್ನಡ ಕ್ರಾಂತಿ ದಳದ ಅಧ್ಯಕ್ಷ ‌ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು,ಒಬ್ಬ ಪ್ರಾಮಾಣಿಕ ಜನನಾಯಕನಿಗೆ ನಂಬಿಸಿ ಅರ್ಧ ದಾರಿಯಲ್ಲಿ ಕಾಂಗ್ರೆಸ್ ನಾಯಕರು ಕೈ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನ ಕೃಷ್ಣ ರಾಜ ಕ್ಷೇತ್ರದಲ್ಲಿ ಕೂಡಾ ರಾಘು ಆಚಾರ್ ರವರು ಹಲವು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದರು, ಆಗಿನಿಂದಲೂ ಅವರನ್ನು ನಾನು ಹತ್ತಿರದಿಂದ ಬಲ್ಲೆ

ಕನ್ನಡ ಹೋರಾಟಗಾರರ ಮೇಲೆ ಅಪಾರವಾದ ಗೌರವ, ಪ್ರೀತಿ, ಹೊಂದಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರದ ಬಡವರಿಗೆ, ಕಾರ್ಮಿಕರಿಗೆ ಹಿಂದುಳಿದ ಜನಾಂಗದವರಿಗೆ ಉಚಿತ ಆಟೋಗಳನ್ನು ನೀಡಿದ್ದಾರೆ, ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರಗಳನ್ನು ಕೊಟ್ಟು ಪ್ರೋತ್ಸಾಹಿಸಿದ್ದಾರೆ ಎಂದು ಹೇಳಿದರು.

ಆಗಲೂ ಕೂಡ ರಘು ಆವಾರ್‌ ಗೆ ಕೆ ಆರ್ ಕ್ಷೇತ್ರದಲ್ಲಿ ಟಿಕೆಟ್ ನೀಡದೆ ಮೋಸ ಮಾಡಿದರು ಎಂದು ದೂರಿದರು.

ರಘು ಆಚಾರ್ ರವರು 2023ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಬೇರಾವುದೇ ಪಕ್ಷದಿಂದ ಸ್ಪರ್ಧೆ ಮಾಡಿ ಗೆದ್ದು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದರು.

ಚಿತ್ರದುರ್ಗ ಜಿಲ್ಲೆಯ ನಮ್ಮ ಕನ್ನಡ ಕ್ರಾಂತಿದಳ ಸಂಘಟನೆಯಿಂದ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಭರವಸೆ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ