ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡಿನ ಆಧುನಿಕ ಭಗೀರಥ ಶ್ರೀ ಸತೀಶ್ ಜಾರಕಿಹೊಳಿ ಅವರಿಂದ ಯಮಕನಮರಡಿ ಮತಕ್ಷೇತ್ರದ ಕಡೋಲಿಯಲ್ಲಿ ಕಾರ್ಯಕರ್ತರ ಮನೆಗಳಿಗೆ ಭೇಟಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ನಿನ್ನೆ ಕರುನಾಡಿನ ಆಧುನಿಕ ಭಗೀರಥ ಶ್ರೀ ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕಡೋಲಿಯಲ್ಲಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಮೇ 10 ರಂದು ಜರುಗಲಿರುವ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲವನ್ನು ಕೊಡಬೇಕೆಂದು ಜನರಲ್ಲಿ ಮನವಿ ಮಾಡಿದರು.

ಕಳೆದ ಮೂರು ಅವಧಿಗಳಲ್ಲಿ ಯಮಕನಮರಡಿ ಮತಕ್ಷೇತ್ರದಾದ್ಯಂತ ಜನರು ಮೆಚ್ಚುವಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಅಧಿಕಾರವನ್ನು ಸೇವೆ ಎಂದು ಭಾವಿಸಿ ಜನರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ ಕೇವಲ ಪ್ರಚಾರ ಮತ್ತು ಮಾತುಗಳಿಗೆ ಸೀಮಿತವಾಗದೆ ಎಲ್ಲರ ಕಣ್ಣಿಗೆ ಕಾಣುವ ಹಾಗೆ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ ಇದನ್ನು ಗುರುತಿಸಿ ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಅರುಣ್ ಕಾಂಟಾಬಳ್ಳಿ ರಾಜು ಮಾಯಣ್ಣ ಬಾಳೇಶ ದಾಸನಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಹಿರಿಯರು ಮಹಿಳೆಯರು ಯುವಕರು ಗ್ರಾಮಸ್ಥರು ಆಪ್ತ ಸಹಾಯಕರಾದ ಮಲಗೌಡ ಪಾಟೀಲ್ ಪಾಂಡು ಅಣ್ಣಾ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ