ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ:ಲೀಲಾವತಿ ಬಂಡೂರಿ

ಸಿರುಗುಪ್ಪ:ಮಹಾತ್ಮಗಾಂಧಿ ರಾಷ್ರ್ಟೀಯ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವ ತಿಳಿಸುವ ಜತೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಲೀಲಾವತಿ ಬಂಡೂರಿ ಕರೆ ನೀಡಿದರು.

ತಾಲೂಕಿನ ರಾರಾವಿ ಗ್ರಾಮದ ಬಾಗೇವಾಡಿ ಮಂಜುನಾಥ ಹೊಲದಿಂದ ಲಕ್ಷಮ್ಮ ಗುಡಿಯವರೆಗೆ  ನಾಲ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಬೋಧನ ಕಾರ್ಯಕ್ರಮದಲ್ಲಿ  ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ.

ನಂತರ ಮಾತನಾಡಿದ ಅವರು ಬಲಿಷ್ಠ ಪ್ರಜಾಪ್ರಭುತ್ವ ರಚನೆಯಲ್ಲಿ ಪ್ರತಿಯೊಬ್ಬರು ಮತದಾನದ ಪಾತ್ರ ಅಮೂಲ್ಯ ಅದನ್ನು ಹಣ,ಮದ್ಯಕ್ಕೆ ಮಾರಿಕೊಳ್ಳದಂತೆ ಹಾಗೂ ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯದ ಭದ್ರತೆ ಹೆಚ್ಚಿಸುವ ಮತ್ತು ಸ್ಥಳೀಯವಾಗಿ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 309 ರೂ ನಿಂದ 316 ರೂ ಕೂಲಿ ಹೆಚ್ಚಿಸಲಾಗಿದ್ದು ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಯೋಜನೆಯ  ಪ್ರಯೋಜನೆಯನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ಪ್ರತಿಯೊಬ್ಬರು ನಿಮ್ಮಗ್ರಾಮದ ಬದು ನಿರ್ಮಾಣ,ಕೆರೆ ಹೂಳೆತ್ತುವುದು ಕಾಲುವೆ ಸ್ಥಳೀಯವಾಗಿ ನಿರಂತರ ಉದ್ಯೋಗ ಒದಗಿಸುವ ಕೆಲಸ ನಿರಂತವಾಗಿ ಮಾಡುತ್ತಿದ್ದು ಎಲ್ಲಾರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ನರೇಗಾ ಯೋಜನೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂ  ಕ್ಲರ್ಕ್ ಕಂ ಡಿಇಓ ಕೆ.ಸೋಮಶೇಖರ್ ಸಿಬ್ಬಂದಿಗಳಾದ ವೆಂಕಟೇಶ್,ಜಂಬುನಾಥ,ಚಿನ್ನರೆಡ್ಡಿ,ಬಿ ಎಫ್ ಟಿ ವೀರೇಶ್,ಕಾಯಕ ಮಿತ್ರ ಸರಸ್ವತಿ,ಸೇರಿದಂತೆ ನೂರಾರು ಕೂಲಿ ಕಾರ್ಮಿಕರು ಇದ್ದರು.

ವರದಿ:ಪವನ್ ಕುಮಾರ್
ಕರುನಾಡ ಕಂದ ಪತ್ರಿಕೆ ವರದಿಗಾರ ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ