ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೋಲಗೇರಿಯಲ್ಲಿ ಮಿಲಿಟರಿ ಹೆಜ್ಜೆ ಸಿಪಿಐ ಹುಲಗಪ್ಪ ಸೂಚನೆ

ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಮಾಡಬೇಕು ಗಲಾಟೆ ಮಾಡಿದರೆ ಕ್ರಮ ಕಟ್ಟಿದ್ದ ಬುತ್ತಿ ಸಾರ್ವಜನಿಕರು ಶಾಂತಿಯುತ ಮತದಾನಕ್ಕಾಗಿ ಸಹಕಾರ ನೀಡಬೇಕು ಎಂದು ಸಿಪಿಐ ಹುಲಗಪ್ಪ ಡಿ ಸೂಚಿಸಿದರು ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತವಾಗಿ ಅಸ್ಸಾಂನ ಪಾರಾ ಮಿಲಿಟರಿ ಸೈನಿಕರೊಂದಿಗೆ
ಮಂಗಳವಾರ ತಾಲೂಕಿನ ಗೋಲಗೇರಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು ಗ್ರಾಮದಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ನೋಡಿಕೊಳ್ಳುವುದು ಸಾರ್ವಜನಿಕರ ಆದ್ಯ ಕರ್ತವ್ಯ ಚುನಾವಣೆ ಸಂದರ್ಭದಲ್ಲಿ ಗಲಾಟೆ ಮಾಡಿದವರ ಮೇಲೆ ಕೂಡಲೇ ಎಫ್ಐಆರ್ ಮಾಡಲಾಗುವುದು ಮುಂದೆ ಬರುವ ಚುನಾವಣೆಗಳಲ್ಲೂ ಕೂಡ ಹಂತವರನ್ನು ಚುನಾವಣೆ ಮುಂಚಿತವಾಗಿ ಜೈಲಿಗೆ ಕಳಿಸಲಾಗುತ್ತದೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ಆಗಿರಬಹುದು ಅಥವಾ ಅವರ ಸಹಚಾರರು ನಮ್ಮ ಪಕ್ಷಕ್ಕೆ ಮತ ಹಾಕಬೇಕು ಎಂದು ಬೆದರಿಕೆ ಹಾಕಿದರೆ ಕೂಡಲೇ ನಮ್ಮ ಗಮನಕ್ಕೆ ತರಬೇಕು ಮತದಾನ ಶ್ರೇಷ್ಠವಾದದ್ದು ದುಡ್ಡಿಗಾಗಿ ಹೆಂಡಕ್ಕಾಗಿ ಮಾರಿಕೊಳ್ಳಬೇಡಿ ಎಂದು ಮನವಿ ಮಾಡಿದರು ಸೇನಾ ಪಡೆಗೆ ಗೋಲಗೇರಿ ಗ್ರಾಮದ ಸಂತೋಷ್ ಪಾಟೀಲ್ (ಡಂಬಳ) ಗೆಳೆಯ ಬಳಗದಿಂದ ಸೈನಿಕರಿಗೆ ವಿಶೇಷವಾಗಿ ಸನ್ಮಾನಿಸಿ ಹೂ ಎಸೆದು ಸ್ವಾಗತಸಿದರು ಈ ಸಂದರ್ಭದಲ್ಲಿ ಸಿಂದಗಿಯ ಸಿಪಿಐ ಹುಲಗಪ್ಪ ಡಿ ಕಲಕೇರಿಯ ಪೊಲೀಸ್ ಠಾಣೆ ಪಿಎಸ್ಐ ವಿಜಯ ಕಾಂಬಳೆ ಎಎಸ್ಐ. ಬಾವಿಕಟ್ಟಿ ಕಲಕೇರಿ ಪೊಲೀಸ್ ಠಾಣೆ ಸರ್ವ ಸಿಬ್ಬಂದಿ ಇದ್ದರು.

ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ