ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತ ರತ್ನ,ಸಂವಿಧಾನ ಶಿಲ್ಪಿ,ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್‌ರವರ 132ನೇ ಜನ್ಮ ದಿನಾಚರಣೆ

ಭದ್ರಾವತಿಯಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ,ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್‌ರವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಿಂದ,ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ,ತಾಲೂಕು ಕಛೇರಿ ರಸ್ತೆ ಮೂಲಕ ಹೊಸಸೇತುವೆ ರಸ್ತೆಯಿಂದ ಸಭಾ ವೇದಿಕೆವರೆಗೂ ಬೃಹತ್ ಬೈಕ್‌ರ‍್ಯಾಲಿ ನಡೆಸಲಾಯಿತು. ರ‍್ಯಾಲಿಯಲ್ಲಿ ಪ್ರಮುಖರಾದ ಬಾಲಕೃಷ್ಣ,ಮುರುಳಿ, ರಾಜೇಂದ್ರ,ಎಚ್.ರವಿಕುಮಾರ್,ವೆಂಕಟೇಶ್,ಬಿ. ಜಗದೀಶ್,ಇ.ಪಿ ಬಸವರಾಜ್,ಧರ್ಮರಾಜ್,ಸಿ. ಜಯಪ್ಪ,ಕೃಷ್ಣನಾಯ್ಕ,ಐಸಾಕ್ ಲಿಂಕನ್,ಎಸ್. ಉಮಾ, ರೇಖಾ, ಹನುಮಮ್ಮ, ಕಾಣಿಕ್‌ರಾಜ್, ನಿತ್ಯಾನಂದ, ಕುಪ್ಪಸ್ವಾಮಿ, ಭಾಸ್ಕರ್‌ಬಾಬು, ಡಿ. ರಾಜು, ಹಾವು ಮಂಜ, ಮಹೇಶ್(ಜೆಪಿಎಸ್), ಲೋಕೇಶ್, ಜಗದೀಶ್, ವರುಣ್‌ಗೌಡ, ಎ. ತಿಪ್ಪೇಸ್ವಾಮಿ, ಮಂಜುನಾಥ್, ರವಿಕುಮಾರ್(ವಿಐಎಸ್‌ಎಲ್) ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ