ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿಯ ಕೇಂದ್ರದಲ್ಲಿ ಏಪ್ರಿಲ್ ಕೂಲ್ ಆಚರಣೆ

ರಾಯಚೂರು: ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿಯ ಕೇಂದ್ರದಲ್ಲಿ ಪಕ್ಷಿಗಳಿಗೆ ಅರವಟ್ಟಿಗೆ ಕಟ್ಟುವ ಮೂಲಕ ಎಪ್ರಿಲ್ ಕೂಲ್ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ.ಮಲ್ಲರಡ್ಡಿ ಸಾಹುಕಾರ ಪರಿಸರ ಪ್ರೇಮಿಗಳು ಹಾಗೂ ಸಾವಯವ ಕೃಷಿ ತಜ್ಞರು ಮಾತನಾಡಿ ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ ಈ ತಂಡ ಗಿಡಮರಗಳಿಗೆ ಅರವಟ್ಟಿಗೆ ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ತುಂಬಾ ಶ್ಲಾಘನೀಯ ಎಂದರು. ವನಸಿರಿ ತಂಡದ ಜೊತೆಗೆ ನಾವುಗಳೆಲ್ಲರೂ ಕೈಜೋಡಿಸಿ ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರುಣಿಸುವ ಮೂಲಕ ಸರ್ವ ಪಕ್ಷಗಳ ಜೀವವನ್ನು ಉಳಿಸಬೇಕು ಎಂದು ತಿಳಿಸಿದರು.ಬ್ರಹ್ಮಕುಮಾರಿ ಕೇಂದ್ರದಲ್ಲಿರುವ ಸುಮಾರು70 ಮಕ್ಕಳಿಗೆ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.ಮಕ್ಕಳಿಗೆ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತಗಳು,ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ಇನ್ನೂ ಮುಂದೆ ನಾವುಗಳೆಲ್ಲರೂ ಪರಿಸರ ಸ್ನೇಹಿ ಬ್ಯಾಗ್ ಗಳನ್ನು ಉಪಯೋಗಿಸಬೇಕು.ಪರಿಸರ ರಕ್ಷಣೆ ಮಾಡಬೇಕಾದರೆ ಗಿಡಮರಗಳನ್ನು ಬೆಳೆಸಬೇಕು, ಒಳ್ಳೆಯ ಆಹಾರಗಳನ್ನು ಸೇವಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕುಮಾರಿ ಕೇಂದ್ರದ ಅಕ್ಕನವರಾದ ಸ್ಮಿತಾ ಅಕ್ಕ,ಶಾರದಾ ಅಕ್ಕ,ಹಾಗೂ ಸುಮಾರು 70ಮಕ್ಕಳು ಅತಿ ಉತ್ಸಾಹದಿಂದ ಭಾಗವಹಿಸಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯವನ್ನು ನೆರವೇರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ