ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಚುನಾವಣಾ ನಂತರ:ಗ್ಯಾರಂಟಿ ಕಾರ್ಡ್ ಆಟಕ್ಕೆ ಉಂಟು ಲೆಕ್ಕಕ್ಕಿಲ್ಲ

ಯಾದಗಿರಿ ಶಹಾಪುರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿಯವರ ಪರ ರೋಡ್ ಶೋ ಮಾಡಲಾಯಿತು. ಚರಬಸವೇಶ್ವರ ಚೌಕ್ ನಲ್ಲಿ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿದರು. ದೇಶದಲ್ಲಿ ಸುಳ್ಳು ಭರವಸೆ ಕೊಟ್ಟು ಆಡಳಿತ ನಡೆಸಿದೆ ಎಂದರೆ ಅದು ಕಾಂಗ್ರೆಸ್ ಪಕ್ಷ ಇನ್ನೂ ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಜಾತಿ ಧರ್ಮಗಳ ಮಧ್ಯೆ ಒಡೆದು ವೀರಶೈವ ಲಿಂಗಾಯತರನೇ ಬಷ್ಟರೆಂದು ಹೇಳಿದ ಸಿದ್ದರಾಮಯ್ಯ ಹೇಳಿದ್ದು ಲಿಂಗಾಯತರು ಭ್ರಷ್ಟರೇ?
130 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜಾತಿ ಸಮಿತಿ ರಚನೆ ಮಾಡಿ . ವರದಿಯನ್ನು ಬಹಿರಂಗ ಮಾಡದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಕತ್ತಿದ್ದಲ್ಲಿ ವರದಿಯನ್ನು ಬಹಿರಂಗಗೊಳಿಸಿರಿ. ಎಂದು ಸವಾಲ್ ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. 75 ಮೀಸಲಾತಿ ಕೊಡುತ್ತೇವೆ ಎಂದು ಹೇಳುವ ಕಾಂಗ್ರೆಸ್ ಸಿದ್ದರಾಮಯ್ಯನವರೇ ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಬಾವಿಗೆ ಹಾಕಿದ್ದೀರಿ. ಮುಂದೆ ಬರುವ ದಿನಗಳಲ್ಲಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗುತ್ತಾರೆ. ಈ ವರ್ಷ 5 ಸಾವಿರ ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನೀಡುತ್ತವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ಈ ಕ್ಷೇತ್ರದ ಭವಿಷ್ಯವನ್ನು ಬರೆಯುತ್ತಾರೆ.ಸದಾ ಜನರೊಂದಿಗೆ ಬೆರೆಯುವ ಈಗ ಇವರನ್ನು ಗೆಲ್ಲಿಸಿದರೆ ಪ್ರಾಮಾಣಿಕವಾಗಿ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತಾನೆ ಎಂದು ಬಸವರಾಜ ಬೊಮ್ಮಾಯಿ ಯಾಳಗಿ ಪರ ಮತಯಾಚಿಸಿದರು. ಇದೇ ಸಂದರ್ಭದಲ್ಲಿ ಸಂಸದ ಅಮರೇಶ ನಾಯಕ್, ರಾಜಸ್ಥಾನ ಎಂಪಿ ನಾರಾಯಣಲಾಲ್ ಪಂಚಾಯರ್, ಜಿಲ್ಲಾ ಅಧ್ಯಕ್ಷ ಶರಣಭೂಪಾಲ್ ರೆಡ್ಡಿ, ಚಂದ್ರಶೇಖರ ಸುಬೇದಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ