ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೇ.6ರಂದು ಮತದಾನ ಜಾಗೃತಿ ಮತ್ತು ಅಭ್ಯರ್ಥಿಗಳೊಂದಿಗೆ ಸಂವಾದ

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಮೇ.6ರಂದು ಬೆಳಿಗ್ಗೆ 11.05 ರಿಂದ 12.30 ರ ವರೆಗೆ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮತದಾನ ಜಾಗೃತಿ ಮತ್ತು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು. ನಿವೃತ್ತ ಕಾರ್ಮಿಕರಿಗೆ ಬರಬೇಕಾಗಿರುವ ಲಕ್ಷಾಂತರ ರೂ. ಬಾಕಿ ಹಣ ಕೊಡಿಸುವ ಕುರಿತು ಮತ್ತು ಕಾರ್ಖಾನೆಯನ್ನು ಮುಚ್ಚುವ ಸ್ಥಿತಿಗೆ ತಂದು ಈಗಲೂ ಭ್ರಷ್ಟಾಚಾರದೊಂದಿಗೆ ಹಿಂಬಾಗಿಲಿಂದ ಅಧಿಕಾರದ ಚುಕ್ಕಾಣಿ ಹೊತ್ತಿರುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಸಂವಾದದಲ್ಲಿ ಚರ್ಚಿಸುವ ಅವಕಾಶ ಒದಗಿ ಬಂದಿದೆ. ಈ ಅವಕಾಶವನ್ನು ಕ್ಷೇತ್ರದ ಮತದಾರರಾದ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬಹುದು.
ಸಂವಾದದಲ್ಲಿ ಪಾಲ್ಗೊಳ್ಳಲು ಇಚ್ಛೆ ಇರುವ ಕಾರ್ಮಿಕರು ಮೇ.5ರ ಮಧ್ಯಾಹ್ನ 12 ಗಂಟೆಯೊಳಗಾಗಿ ತಿಳಿಸುವುದು. ಹೆಸರು ನೋಂದಾಯಿಸಿದವರು ಮಾತ್ರ ಸಂವಾದದಲ್ಲಿ ಭಾಗವಹಿಸಬಹುದಾಗಿದೆ. ಒಬ್ಬ ಅಭ್ಯರ್ಥಿಯೊಂದಿಗೆ ಅವರ ಅನುಯಾಯಿಗಳಲ್ಲಿ ಕೇವಲ ಒಬ್ಬರಿಗೆ ಮಾತ್ರ ಪ್ರವೇಶವಿರುತ್ತದೆ.
ಮೊಟ್ಟ ಮೊದಲ ಬಾರಿಗೆ ಎಲ್ಲಾ ಅಭ್ಯರ್ಥಿಗಳನ್ನು ಒಂದೇ ವೇದಿಕೆಯ ಮೇಲೆ ಕೂರಿಸುವ ಮೂಲಕ ಕ್ಷೇತ್ರದ ಒಗ್ಗಟ್ಟನ್ನು ಪ್ರದರ್ಶಿಸುವುದು ನಮ್ಮ ಉದ್ದೇಶವಾಗಿದೆ. ವೇದಿಕೆಯಲ್ಲಿ ವೈಯಕ್ತಿಕ ನಿಂದನೆ ಮತ್ತು ಗಲಾಟೆಗಳಿಗೆ ಆಸ್ಪದ ನೀಡದಂತೆ ಸಹಕರಿಸುವುದು. ಹೆಚ್ಚಿನ ಮಾಹಿತಿಗೆ ಮೊ: 9481493983 ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದು ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!