ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ರಾಜ್ಯಾಧ್ಯಕ್ಷ:ಸಿ,ಎಂ, ಇಬ್ರಾಹಿಂ ಅವರಿಂದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಯಾದಗಿರಿ: ಶಹಾಪುರ ನಗರದಲ್ಲಿ ನಿನ್ನೆ ಸಿ,ಎಂ, ಇಬ್ರಾಹಿಂ ತಮ್ಮ ಮಾತಿನ ಶೈಲಿಯಲ್ಲಿ ಬಸವಣ್ಣ ವಚನಗಳು ಹೇಳುವ ಮುಖಾಂತರ ಬಿಜೆಪಿ ಮತ್ತು ಕಾಂಗ್ರೆಸ್ ಈ ಎರಡು ಪಕ್ಷಗಳಿಗೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ನೈತಿಕತೆ ಇಲ್ಲ ಕಾಂಗ್ರೆಸ್ ಪಕ್ಷ 70 ವರ್ಷ ಸುಳ್ಳು ಹೇಳತ್ತಾ ಬಂದಿದ್ದಾರೆ ಬಿಜೆಪಿ ದೇಶದಲ್ಲಿ ಜಾತಿ ಧರ್ಮಗಳ ಮಧ್ಯೆ ಜಗಳ ಹೆಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ.
ರಾಜ್ಯದಲ್ಲಿ ಬಡತನ ಹೆಚ್ಚುತ್ತಿದೆ ದಿನನಿತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಅವಶ್ಯಕವಾಗಿದೆ. ಸರ್ಕಾರ ರಚನೆ ಅಗತ್ಯವಾಗಿದೆ.
ಮಣ್ಣಿನ ಮಗ ಎಚ್,ಡಿ,ಕುಮಾರಸ್ವಾಮಿಯವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾದಲ್ಲಿ ರಾಜ್ಯದಲ್ಲಿನ 6 ಸಾವಿರ ಗ್ರಾಮ ಪಂಚಾಯಿತಿ ಗಳಲ್ಲಿ 30 ಹಾಸಿಗೆಗಳ ಆಸ್ಪತ್ರೆ ವಯೋವೃದ್ಧರಿಗೆ ಮಾಸಿಕ 5 ಸಾವಿರ ಮಾಸಾಶನ.10 ಎಕರೆ ರೈತರಿಗೆ ಒಂದು ಲಕ್ಷ ರೂಪಾಯಿ ಸಹಾಯಧನ 20 ಲಕ್ಷ ಆರೋಗ್ಯ ವಿಮೆ. ವರ್ಷಕ್ಕೆ 6 ಸಿಲೆಂಡರ್ ಗ್ಯಾಸ್ ಉಚಿತ ನೀಡಲಾಗುವುದು ಮತ್ತು ಸ್ತ್ರೀ ಶಕ್ತಿ ಸಂಘಗಳ ಮೇಲಿನ ಸಾಲ ಮನ್ನಾ, ಹೆರಿಗೆ ತಾಯಂದಿರಿಗೆ ಮಾಸಿಕ 6 ಸಾವಿರ ರೂಪಾಯಿ.ಆರು ತಿಂಗಳವರೆಗೆ ನೀಡಿ, ತಾಯಿ ಮಕ್ಕಳ ಆರೋಗ್ಯ ಕಾಪಾಡುವ ಸದುದ್ದೇಶ ಹೊಂದಲಾಗಿದೆ ಎಂದು ರಾಜ್ಯ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಸಿ,ಎಂ,ಇಬ್ರಾಹಿಂ ರವರು ಪಕ್ಷದ ಪ್ರನ್ನಾಳಿಕೆ ಕುರಿತು ಘೋಷಣೆ ಮಾಡಿದರು.
ಮುಂದುವರೆದು ಮಾತನಾಡಿದ ಅವರು ಮಾಹಾತ್ಮ ಬಸವಣ್ಣನವರ, ಡಾ||ಅಂಬೇಡ್ಕರವರ ತತ್ವ ಸಿದ್ದಾಂತಗಳ ಅಡಿಯಲ್ಲಿ ಜೆಡಿಎಸ್ ಪಕ್ಷ ಕಾರ್ಯನಿರ್ವಹಣೆ ಮಾಡುತ್ತಿದೆ ಬೇಡಜಂಗಮ ಕುರಿತು ಚರ್ಚಿಸಿದಾಗ ಅವರಿಗೆ
ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿದ್ದು ಅಲ್ಲದೆ ಟಿಪ್ಪು ವಿಶ್ವವಿದ್ಯಾಲಯ ಸ್ಥಾಪನೆ ಮಾಡಿ ಅಭಿವೃದ್ಧಿ ಪೂರಕವಾಗಿ ಸ್ಥಾಪನೆ ನೀಡಲಾಗುವುದು ಎಂದು ಹೇಳಿದರು.
ಪ್ರಧಾನಿ ಮೋದಿ, ಯು.ಪಿ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಕಾಂಗ್ರೆಸ್ ನಾಯಕ ಜಮೀರ್ ಅಹಮದ್,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪರನ್ನು ತರಾಟೆಗೆ ತೆಗೆದುಕೊಂಡ ಸಿ.ಎಂ.ಇಬ್ರಾಹಿಂ ಇವರ ಕಾರ್ಯವೈಖರಿಗಳ ಮತ್ತು ಆರೋಪಗಳ ಕುರಿತು ಹಾಸ್ಯ ಚಟಾಕಿಗೈದರು. ಜೆಡಿಎಸ್ ಪಕ್ಷದ ಅಭ್ಯರ್ಥಿ ಗುರು ಪಾಟೀಲ್ ಶಿರವಾಳ ಚನ್ನಪ್ಪಗೌಡ ಮೋಸಂಬಿ. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಮಾತೆಪ್ಪ ಕಂದಕೂರ. ಜೆಡಿಎಸ್ ಹಿರಿಯ ಮುಂಡರಾದ ಮಲ್ಲಣ್ಣ ಮಡ್ಡಿ, ಪಿಡಪ್ಪ ನಂದಿಕೊಲ್, ನ್ಯಾಯವಾದಿ ರಾಮಣ್ಣ ಗೌಡ ಕೊಲ್ಲೂರು, ಸಾಲೋಮನ್ ಅಲ್ಪಡ್, ಕಾಂತು ಪಾಟೀಲ್, ಮಾಪಣ್ಣ ಮುದ್ದರ್ಕಿ, ಶೇಖರ್ ದೊರಿ, ವಾಸುದೇವ ಕಟ್ಟಿಮನಿ, ಸೇರಿದಂತೆ ಅನೇಕ ಗಣ್ಯರು ಹಿರಿಯರು ಹಾಗೂ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ