ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಶಾಸಕ ಎಂ.ಆರ್.ಮಂಜುನಾಥ್ ಕ್ಷೇತ್ರ ಪ್ರವಾಸ

ಚಾಮರಾಜನಗರ/ಹನೂರು ಕ್ಷೇತ್ರದ ನೂತನ ಶಾಸಕ ಎಂ.ಆರ್.ಮಂಜುನಾಥ್ ಅವರು ಇಂದು ಕೊಳ್ಳೇಗಾಲ ತಾಲ್ಲೂಕಿನಲ್ಲಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಗ್ರಾಮಗಳಿಗೆ ಪ್ರವಾಸ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ತಾಲ್ಲೂಕಿನ ಸತ್ತೇಗಾಲ,ಜಾಗೇರಿ,ಧನಗೆರೆ ಸರಗೂರು, ನರೀಪುರ ಸೇರಿದಂತೆ ಇನ್ನೀತರೆ ಗ್ರಾಮಗಳಿಗೆ ಭೇಟಿ ಮಾಡಿದರು. ಗ್ರಾಮಗಳಲ್ಲಿ ನೂತನ ಶಾಸಕರಿಗೆ ಆರತಿ ಬೆಳಗಿದರು. ಈ ವೇಳೆ ಎಲ್ಲಾ ಗ್ರಾಮದ ಕಾರ್ಯಕರ್ತರು ಮತದಾರರು ನೂತನ ಶಾಸಕರಿಗೆ ಜೈಕಾರ ಕೂಗಿ ಹಾರ ಹಾಕಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಧನಗೆರೆ ಗ್ರಾಮದ ರಾಷ್ಟ್ರೀಯ ಮುಖ್ಯರಸ್ತೆಯ ಒಂದು ಬದಿಯಲ್ಲಿ 300 ಮೀಟರ್ ರಸ್ತೆ ಅಪೂರ್ಣವಾಗಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿದೆ. ನೆನೆಗುದಿಗೆ ಬಿದ್ದಿರುವ ಈ ರಸ್ತೆಯನ್ನು ಪೂರ್ಣಗೊಳಿಸಿಕೊಡುವಂತೆ ಗ್ರಾಮಸ್ಥರು ನೂತನ ಶಾಸಕರಿಗೆ ಮನವಿ ತಿಳಿಸಿದರು ಮನವಿಗೆ ಸ್ಪಂದಿಸಿದ ಶಾಸಕರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಪೋನ್ ಕರೆ ಮಾಡಿ ರಸ್ತೆಯನ್ನು ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.
ಕ್ಷೇತ್ರ ಪ್ರವಾಸದಲ್ಲಿ ಎಲ್ಲಾ ಗ್ರಾಮದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ