ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣಕ್ಕೆ ತೇಜಸ್ವಿ ಆಗ್ರಹ

ಮೈಸೂರು:ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡುವಂತೆ ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡಲೇಬೇಕೆಂದು ಆಗ್ರಹಿಸಿದ್ದಾರೆ.
ಚಾಮುಂಡಿ ಬೆಟ್ಟದ ನಿವಾಸಿ ಹಾಗೂ ಪತ್ರಕರ್ತರಾದ ಸತ್ಯನಾರಾಯಣರವರು ವರ್ಷದ ಹಿಂದೆಯೇ ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡುವಂತೆ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿಗೆ ಮನವಿ‌ ಮಾಡಿದ್ದರು.
ಈ ಕುರಿತು ಹಿಂಬರಹ ಕಳುಹಿಸಿರುವ ಗ್ರಾಮ ಪಂಚಾಯಿತಿ ಪಿಡಿಒ,ಈ ವಿಷಯಕ್ಕೆ ಸಂಬಂಧಪಟ್ಟಂತೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚಾಮುಂಡಿ ಬೆಟ್ಟದ ನಾಯಕರ ಸಮುದಾಯ ಭವನದ ಕಛೇರಿಯ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪುತ್ಥಳಿ ನಿರ್ಮಾಣ ಮಾಡುವಂತೆ‌ ತಿಳಿಸಿದ್ದಾರೆ.
ಈ‌ ಬಗ್ಗೆ 29.6.2022 ರಂದು ಸಭೆಯಲ್ಲಿ ಸರ್ವಾನುಮತದಿಂದ ತಿರ್ಮಾನಿಸಿ ಒಂದು ವರ್ಷವೇ ಕಳೆದಿದ್ದರೂ ಸಹ‌ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಕಾರ್ಯ ಆರಂಭವಾಗದೆ ಇರುವುದು ಬೇಸರದ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿಯ ಸಂಭಂದ ಪಟ್ಟ ಅಧಿಕಾರಿಗಳು ಪುತ್ಥಳಿ ನಿರ್ಮಾಣ ಕಾರ್ಯ ಆರಂಭ ಮಾಡಬೇಕು ಇಲ್ಲವಾದಲ್ಲಿ ಹೋರಾಟ‌ ಮಾಡ ಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಎಚ್ಚರಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ