ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾಡಹಗಲೇ ಟ್ರಾಕ್ಟರ್ ನಲ್ಲಿ ಅಕ್ರಮ ಮರಳು ಸಾಗಣೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ವೇದಾವತಿ ನದಿಯಿಂದ ಹಾಡಹಗಲೇ ಮರಳು ದಂಧೆ ನಡೆಯುತ್ತಿದ್ದು ಟ್ರಾಕ್ಟರ್ ನಲ್ಲಿ ತುಂಬಿಕೊoಡು ಅಕ್ರಮ ಮರಳು ಸಾಗಿಸುತ್ತಿದ್ದರೂ ಕೂಡಾ ಈ ಅಕ್ರಮವನ್ನು ತಡೆಯುವಲ್ಲಿ ಅಧಿಕಾರಿಗಳ ವಿಫಲತೆ ಎದ್ದು ಕಾಣುತ್ತಿದೆ.
ಅಕ್ರಮ ಮರಳು ತಡೆಗೆ ಸಂಬಂಧಿಸಿದ ಕಂದಾಯ ಅಧಿಕಾರಿಗಳು,ಭೂ ಗಣಿ ವಿಜ್ಞಾನ ಮತ್ತು ಅರಣ್ಯ ಇಲಾಖೆ ಜವಾಬ್ದಾರಿಯಿಂದ ನುಣುಚಿಕೊಳ್ಳುವುದರೊಂದಿಗೆ ಅನ್ಯ ಇಲಾಖೆಗಳ ಮೇಲೆ ಬೆರಳು ಮಾಡುತ್ತಾ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಅಕ್ರಮದಲ್ಲಿ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮಾಹಿತಿ ನೀಡಿದವರನ್ನೇ ಬೆದರಿಸಲಾಗುತ್ತಿದೆಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಭಯದ ವಾತಾವರಣವನ್ನುಂಟು ಮಾಡುತ್ತಿವೆ.
ಪ್ರತಿ ಗ್ರಾಮಕ್ಕೆ ಪೋಲೀಸ್ ಇಲಾಖೆಯಿಂದ ಬೀಟ್ ಪೋಲೀಸ್ ಸಿಬ್ಬಂದಿ,ತಾಲೂಕು ಮಟ್ಟದ ಟಾಸ್‌ಪೋರ್ಸ್ ಸಮಿತಿ ಇದ್ದೂ ಇಲ್ಲದಂಗಾಗಿದ್ದು ಅಕ್ರಮಗಳನ್ನು ನಿಯಂತ್ರಿಸಲು ಮುಂದಾಗದಿರುವುದು ಹಾಗೂ ರಸ್ತೆ,ಚರಂಡಿ,ಕಟ್ಟಡ ನಿರ್ಮಾಣದಂತಹ ಅಭಿವೃದ್ದಿ ಕಾರ್ಯಗಳಿಗೂ ಗುತ್ತಿಗೆದಾರರು ಬಳಸಿಕೊಳ್ಳುವ ಅಕ್ರಮ ಮರಳು ದಂಧೆಗೆ ಪುಷ್ಠಿಯಾಗಿದೆ ಇನ್ನು ಮುಂದಾದರೂ ಅಧಿಕಾರಿಗಳು ಗಮನವಹಿಸಿ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಿ ಮರಳು ದಂಧೆಗೆ ಬಳಸಲಾಗುವ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಕಡ್ಡಾಯವಾಗಿ ಅಕ್ರಮವನ್ನು ತಡೆಗಟ್ಟಲು ಮುಂದಾಗಬೇಕಿದೆ.

ವರದಿ:ಎಂ.ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ