ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಉಳಿವು ಜಾಗೃತಿಗಾಗಿ ಆಂಧ್ರಪ್ರದೇಶದ ಯುವಕನ ವಿಶಿಷ್ಟಅಭಿಯಾನ:50 ಸಾವಿರ ಕಿ.ಮೀ ಸೈಕಲ್ ಜಾಥಾ:ಭದ್ರಾವತಿಯಲ್ಲಿ ಯುವಕನಿಗೆ ಅಭಿನಂದನೆ

ಭದ್ರಾವತಿ:ಪರಿಸರ ಉಳಿವಿಗಾಗಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು 50 ಸಾವಿರ ಕಿ.ಮೀ.ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದಾರೆ.
ಆಂದ್ರಪ್ರದೇಶದ ನೆಲ್ಲೂರಿನಿಂದ ಆರಂಭಗೊಂಡಿರುವ ಸೈಕಲ್ ಜಾಥಾ ಅಭಿಯಾನ 150 ದಿನಗಳನ್ನು ಪೂರೈಸಿದ್ದು, ಇದುವರೆಗೂ ಸುಮಾರು 10 ಸಾವಿರ ಕಿ.ಮೀ ಕ್ರಮಿಸಿದ್ದಾರೆ. ಭಾನುವಾರ ನಗರಕ್ಕೆ ಆಗಮಿಸಿದ ಚೈತನ್ಯರನ್ನು ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ವಾಸವಾಂಬ ದೇವಾಲಯದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.
ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ, ಶ್ರೀ ಕನ್ಯಕಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್ ಗಿರೀಶ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸತ್ಯಲಕ್ಷ್ಮಿ, ಉಪಾಧ್ಯಕ್ಷೆ ಲತಾ ಬದರೀಶ್, ವಾಸವಿ ಯುವಜನ ಸಂಘದ ಸುಬ್ಬರಾಜ್, ವಾಸವಿ ವನಿತಾ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮಿ, ಕಾ.ರಾ ನಾಗರಾಜ್, ವಿಶಾಲಾಕ್ಷಿ, ನಾಗೇಶ್, ಗೋವಿಂದ, ಎಂ.ಎಲ್ ಶ್ರೀಧರಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ