ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾರರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮ

ತುಮಕೂರು ಜಿಲ್ಲೆಯ ಕುಣಿಗಲ್ ನ ನೂತನ ಶಾಸಕ ಡಾಕ್ಟರ್ ರಂಗನಾಥ್ ರವರು ತನ್ನನ್ನು ಕರ್ನಾಟಕ ವಿಧಾನಸಭೆಗೆ ಆಯ್ಕೆ ಮಾಡಿದ ತನ್ನ ಕ್ಷೇತ್ರದ ಮತದಾರರಿಗೆ ಪಟ್ಟಣದ ಗವಿಮಠ (ಗಿರಗೌಡನ ಪಾಳ್ಯ ಗೇಟ್) ಬಳಿ ಕೃತಜ್ಞತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಶಾಸಕ ರಂಗನಾಥ್ ರವರು ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಸೋದರ ಸಂಬಂಧಿಯಾಗಿದ್ದು,ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರ ವಿರುದ್ಧ 26,573 ಮತಗಳ ಅಂತರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ್ದರು. ಈ ಮೂಲಕ ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ‌.ಕೆ ಸುರೇಶ್ ರವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಡಿ ರಂಗನಾಥ್ ರವರು “ಕ್ಷೇತ್ರದ ಮತದಾರರಿಗೆ ಈ ಐತಿಹಾಸಿಕ ಗೆಲುವನ್ನು ನೀಡಿದ್ದಕ್ಕೆ ಧನ್ಯವಾದಗಳು. ಭಾಗ್ಯಗಳ ಸರದಾರ ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿಗಳು ರಾಜ್ಯದ ಜನತೆಗೆ ತಲುಪುವುದು ಗ್ಯಾರಂಟಿ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಹಾಗೂ ಡಿ.ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಮಾತನಾಡಿ ಜಿಲ್ಲೆಯಲ್ಲಿ ಕುಣಿಗಲ್ ಅನ್ನು ಮಾದರಿ ತಾಲೂಕನ್ನಾಗಿ ಮಾರ್ಪಡಿಸುವುದು ನಮ್ಮ ಗುರಿ. ನಮ್ಮದೇ ಸರ್ಕಾರವಿದೆ ಹೀಗಾಗಿ ಕುಣಿಗಲ್ ಅಭಿವೃದ್ಧಿಯತ್ತ ಸಾಗಲಿದೆ ಎಂಬ ಆಶ್ವಾಸನೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಪದ್ಮಪಾಪಣ್ಣ, ಕಾಂಗ್ರೆಸ್ ವಕ್ತಾರ ಎಂ.ವಿ ವಿಜಯ್ , ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವಿಶ್ವನಾಥ್, ತಾಲೂಕು ಪಂಚಾಯಿತಿ ಸದಸ್ಯ ರಾಜಣ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

-ಮನುಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ