ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಸರ್ಕಾರ ಏಕಾಏಕಿ ವಿದ್ಯುತ್ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ: ಇಂದು ಜೇವರ್ಗಿ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ

ಕಲಬುರ್ಗಿ/ಜೇವರ್ಗಿ:ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಏಕಾಏಕಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಜೇವರ್ಗಿ ತಾಲೂಕ ಬಿಜೆಪಿ ಮಂಡಲ ವತಿಯಿಂದ ನಿನ್ನೆ ಪ್ರತಿಭಟನೆ ಮಾಡುವ ಮೂಲಕ ತಾಲೂಕ ದಂಡಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರ ಕ್ರಮಗಳನ್ನು ಖಂಡಿಸಿ ಗ್ಯಾರೆಂಟಿಗಳಿಗೆ ಕೊಡುತ್ತೇವೆ ಎಂದು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾಗಿದೆ ಎಂದು ಪ್ರತಿಭಟನಕಾರರು ಹೇಳಿದರು.
ಇದೇ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ನಾಯಕರು, ಬಿಜೆಪಿಯ ಜಿಲ್ಲಾ ಅದ್ಯಕ್ಷರಾದ ಶಿವರಾಜ ಪಾಟೀಲ್ ರದ್ದೇವಾಡಗಿ ರವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮಾಡವ ಮೂಲಕ, ಪಕ್ಷದ ಹಿರಿಯ ಮುಖಂಡರಾದ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅದ್ಯಕ್ಷರಾದ ಧರ್ಮಣ್ಣ ದೊಡ್ಡಮನಿ ,ಮಂಡಲದ ಅಧ್ಯಕ್ಷರಾದ ಆರ್ ಭೀಮರಾವ್, ಹಿರಿಯರಾದ ಹಳ್ಳೆಪ್ಪ ಆಚಾರ್ಯ ಜೋಶಿ ,ಎಸ್ ಸಿ ಮೋರ್ಚಾ ಮರೆಪ್ಪ ಬಡಿಗೇರ,ಗುರುರಾಜ ಸುಲಹಳ್ಳಿ ,ಎಸ್ ಸಿ ಮೋರ್ಚಾ ತಾಲೂಕ ಅದ್ಯಕ್ಷರಾದ ಭಾಗಣ್ಣ ಯಲಗೋಡ ,ಗಿರಿಜಾ ಶಂಕರ ರಾಮನಗೊಳ ,ಗುರು ಸಿಕೇದ್ , ಮಲ್ಲಣ್ಣ ಕುಲಕರ್ಣಿ ,ಪ್ರ.ಕಾ ಗಳಾದ ಭಾಗೇಶ ಹೋತಿನಮಡು ,ಸುರೇಶ ಹಳ್ಳಿ ,ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ ಪಾಟೀಲ ನೇದಲಗಿ , ಸಂಗನಗೌಡ ರದ್ದೇವಾಡಗಿ, ಸಂತೋಷ ಮಲ್ಲಬಾದ್, ವಿಶ್ವರಾಜ ಬಡಿಗೇರ, ಸುರೇಶ ಹಿಪ್ಪರಗಿ, ಅನಿಲ ದೊಡ್ಡಮನಿ, ಸಾಗರ ಬಡಿಗೇರ, ಸೇರಿದಂತೆ ಅನೇಕ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ