ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನರೇಗಾದ ಹೊರ ಗುತ್ತಿಗೆ ನೌಕರರಿಗೆ ವರ್ಗಾವಣೆ: ಸಿಇಓ ಗರಿಮಾ ಪನ್ವಾರ ಆದೇಶ

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಓ ಗರಿಮಾ ಪನ್ವಾರ ನರೇಗಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ನೌಕರರ ಕಾರ್ಯ ನಿರ್ವಾಹಿಸುತ್ತಿರುವ ಸಿಬ್ಬಂದಿಗಳನ್ನು ತಾಲೂಕುವಾರು ಸ್ಥಳ ಬದಲಾವಣೆ ಮಾಡಿದ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀಮತಿ ಗರಿಮಾ ಪನ್ವಾರ ಆದೇಶ ಹೊರಡಿಸಿದ್ದಾರೆ. ಒಂದೇ ಜಾಗದಲ್ಲಿ ಮತ್ತು ಒಂದೆರಡು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಬೇರೆಡೆ ವರ್ಗಾವಣೆ ಮಾಡಿರುವುದು ಗ್ರಾಮೀಣ ಭಾಗದ ಜನರು ಸಂತಸ ವ್ಯಕ್ತಪಡಿಸಿದರು.
ಪ್ರತಿ ಒಂದು ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ನರೇಗಾ ತಾಂತ್ರಿಕ ಸಂಯೋಜಕರು ಸೇರಿದಂತೆ ಇತರ ಅಧಿಕಾರಿಗಳು ಕೆಲವು ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ. ಜಿಲ್ಲಾ ಕೇಂದ್ರವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ. ಇದರಿಂದ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಹೇಳಿದರು.
ಸಿಇಓ ಗರಿಮಾ ಪನ್ವಾರ ಅವರು ರಾಜಕೀಯ ನಾಯಕರ ಒತ್ತಡಕ್ಕೆ ಮಣಿಯುತ್ತಾರಾ ಕಾದು ನೋಡಬೇಕಾಗಿದೆ. ನರೇಗಾ ಅಧಿಕಾರಿಗಳು ಒಂದೇ ಜಾಗದಲ್ಲಿ ಸುಮಾರು ವರ್ಷಗಳಿಂದ ಝಂಡಾ ಊರಿರುವುದು ರಿಂದ ಸಿಇಓ ಒಳ್ಳೆಯ ನಿರ್ಧಾರ ಕೈಗೊಂಡಿರುವ ಕಾರ್ಯ ನಿರ್ವಾಹಕ ಅಧಿಕಾರಿಗಳು ರಾಜಕೀಯ ನಾಯಕರ ಹಾಗೂ ತಾಲೂಕು ಅಧಿಕಾರಿಗಳ ಒತ್ತಡಕ್ಕೆ ಮಣಿದು ಮತ್ತೆ ಮೂಲ ಜಾಗದಲ್ಲೇ ಮುಂದುವರಿಸುವರು ಎನ್ನುವುದು ಭಯ ಗ್ರಾಮೀಣ ಭಾಗದ ಜನರಿಗೆ ಕಾಡುತ್ತಿದೆ. ತಾಲೂಕ ಅಧಿಕಾರಿಗಳ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯಲ್ಲಿ ಕೆಲ ಬದಲಾವಣೆ ತರುವ ಪ್ರಯತ್ನದಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ತಾಲೂಕುವಾರು ವರ್ಗಾವಣೆ ಜೊತೆಗೆ ಪಿಡಿಓ ಅವರನ್ನು ಸ್ಥಳಾಂತರ ಮಾಡಬೇಕಾಗಿದೆ.
ಆದರೆ ಸಿಇಓ ಗರಿಮಾ ಪನ್ವಾರ ಅವರು ರಾಜಕೀಯ ನಾಯಕರ ಒತ್ತಡಕ್ಕೆ ಮಣಿಯುತ್ತಾರಾ ಎಂದೂ ಕಾದು ನೋಡಬೇಕಾಗಿದೆ ?

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ