ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸರ್ಕಾರಿ ಬಸ್ ತಡೆದು ಪ್ರತಿಭಟನೆ

ಹನೂರು:ಪಟ್ಟಣದಲ್ಲಿ ಕೊಳ್ಳೇಗಾಲ ಮತ್ತು ಮೈಸೂರು ಕಡೆಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಬಸ್ ತಡೆದು ಪ್ರತಿಭಟನೆ ನಡೆಯಿತು ಶಕ್ತಿ ಯೋಜನೆಗೆ ಚಾಲನೆ ನೀಡಿ ಕೇವಲ ನಾಲ್ಕು ದಿನವೂ ಕಳೆದಿಲ್ಲ ಆಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಬಸ್ ಗಳು ಸಮರ್ಪಕವಾಗಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಹೀಗೆ ಆದರೆ ನಮ್ಮ ವಿದ್ಯಾಭ್ಯಾಸ ಏನಾಗಬೇಕು ತಡವಾಗಿ ಹೋದರೆ ಶಾಲಾ ಕಾಲೇಜು ಹಾಜರಾತಿ ಕೊರತೆ ಉಂಟಾದರೆ ನಮ್ಮ ಭವಿಷ್ಯ ಏನಾಗಬೇಕು ಎಂದು ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ ಇನ್ನು ಕಳೆದ ನಾಲ್ಕು ದಿನಗಳ ಹಿಂದೆ ಮಹಿಳೆಯರಿಗೆ ಉಚಿತ ಬಸ್ ಯೋಜನೆ ಅಡಿಯಲ್ಲಿ ಉದ್ಘಾಟನೆ ಮಾಡಿ ಮಾತನಾಡಿದ ಸ್ಥಳೀಯ ಶಾಸಕರು ಸಮರ್ಪಕವಾಗಿ ಕ್ಷೆತ್ರದ ಎಲ್ಲಾ ಕಡೆಗೆ ಯಾವುದೇ ತೊಂದರೆ ಆಗದಂತೆ ಬಸ್ ವ್ಯವಸ್ಥೆ ಮಾಡಿ ಎಂದು ಹೇಳಿದ್ದರು.
ಹನೂರು ತಾಲೂಕು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳು ಇದನ್ನು ಗಣನೆಗೆ ತೆಗೆದುಕೊಳ್ಳದಿರುವುದು ವಿಷಾದನೀಯ ಕ್ಷೆತ್ರದ ಶಾಸಕ ಮಂಜುನಾಥ್ ಯುವಕರ ಭವಿಷ್ಯದ ಬಗ್ಗೆ ವಿಶೇಷ ಚಿಂತನೆಯುಳ್ಳವರು ಕೂಡಲೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಹಾಗಾಗಿ ಶಾಸಕರು ಈ ವಿಚಾರವಾಗಿ ಸೂಕ್ತ ಕ್ರಮ ವಹಿಸಬೇಕೆಂದು ಸಾರ್ವಜನಿಕರು ವಿದ್ಯಾರ್ಥಿಗಳು ಅಗ್ರಹಿಸಿದ್ದಾರೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ