ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಣ್ಣೆತ್ತಿನ ಅಮಾವಾಸ್ಯೆ ದಿನದಂದು:74 ನೇ ಶಿವಾನುಭವ ಗೋಷ್ಠಿ ಸುಕ್ಷೇತ್ರ ಕೃಷ್ಣವೇಣಿ ಭೀಮಾ ಸಂಗಮದಲ್ಲಿ

ಯಾದಗಿರಿ:ವಡಗೇರಾ ತಾಲೂಕಿನ ಸುಕ್ಷೇತ್ರ ಕೃಷ್ಣವೇಣಿ ಭೀಮಾ ಸಂಗಮದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ನಿಮಿತ್ತ 74ನೇ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ರಾಯಚೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಸಂಗನಬಸವಪ್ಪ ಬಿರಾದರ ಗಣಪೂರವರು ಉದ್ಘಾಟಿಸಿ ಮಾತನಾಡಿದರು ಮಠ ಮಂದಿರಗಳು ನೆಮ್ಮದಿ ನೀಡುವ ತಾಣಗಳಾಗಿದ್ದು ಪ್ರತಿಯೊಬ್ಬರೂ ಕೂಡಾ ಬಿಡುವಿನ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನೆಮ್ಮದಿಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಪೂಜ್ಯರ ಅವಿರತ ಶ್ರಮದಿಂದ ಕೃಷ್ಣ ವೇಣಿ ಭೀಮಾ ಸಂಗಮವು ಅಭಿವೃದ್ಧಿಯತ್ತ ಸಾಗುತ್ತಿದೆ ನಾವುಗಳು ಕೂಡಾ ಅವರೊಂದಿಗೆ ಕೈಜೋಡಿಸೋಣ ಎಂದು ಅವರು ಹೇಳಿದರು ಈ ಕಾರ್ಯಕ್ರಮದ ಸಾನಿಧ್ಯವನ್ನು ಕೃಷ್ಣ ವೇಣಿ ಭೀಮಾ ಸಂಗಮದ ಪಿಠಾದಿಪತಿಗಳಾದ ಪೂಜ್ಯ ಶ್ರೀ ಕರುಣೇಶ್ವರ ಮಹಾಸ್ವಾಮಿಗಳು ವಹಿಸಿಕೊಂಡು ಮಾತನಾಡಿದರು ಮನುಷ್ಯನಲ್ಲಿ ಭಕ್ತಿ ಅತಿ ಮುಖ್ಯವಾಗಿದೆ ಡಾಂಬಿಕ ಭಕ್ತಿ ಸರಿಯಲ್ಲ ನಿಜವಾದ ಭಕ್ತಿ ಇದ್ದಾಗ ಮಾತ್ರ ಮನುಷ್ಯನ ಜನ್ಮ ಸಾರ್ಥಕ ಪ್ರತಿಯೊಬ್ಬರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ದೀನ ದಲಿತರ ಬಡವರ ಏಳಿಗೆಗಾಗಿ ಶ್ರಮಿಸುವಂತೆ ಭಕ್ತರಿಗೆ ಕಿವಿ ಮಾತು ಹೇಳಿದರು ಈ ಸಂದರ್ಭದಲ್ಲಿ ಗಜದಂಡಯ್ಯ ಶಾಸ್ತ್ರಿ,ವೀರಭದ್ರಯ್ಯ ಸ್ವಾಮಿ, ದೇವಸಗೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರಗೌಡ ಗೋನಾಲ,ಗುರುನಾಥ್ ರೆಡ್ಡಿ ಗೌಡ ಕದ್ರಾಪುರ,ಶ್ರೀಮತಿ ಶಾರದಾ ಬಾಯಿ ಬಿರಾದಾರ,ಮಲ್ಲಿಕಾರ್ಜುನ ರೆಡ್ಡಿ ಬೆನಕನಹಳ್ಳಿ,ಬಸಪ್ಪಗೌಡ ಕಾಳ ಬೆಳಗುಂದಿ,ಬಸಯ್ಯಸ್ವಾಮಿ ಶಿವಪುರ, ಸಿದ್ದಪ್ಪಗೌಡ ಶಿವಪುರ,ಸೈದಪ್ಪ ರಾಮ್ದುರ್ಗ, ಚನ್ನಪ್ಪ ಗೌಡ ಅಗ್ನಿಹಾಳ,ವೀರೇಶ ಸ್ವಾಮಿ, ಗುರುರಾಜ,ಸೈದಪ್ಪ ಶಿವಪುರ,ಮಹೇಶ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ