ಜೇವರ್ಗಿ ಮತಕ್ಷೇತ್ರದಿಂದ ಆಯ್ಕೆಯಾದ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ಇದುವರೆಗೆ ಕೆಡಿಪಿ ಸಭೆ ಹಮ್ಮಿಕೊಂಡಿರುವುದಿಲ್ಲ ನೂತನ ತಾಲೂಕಾವಾಗಿ ಘೋಷಣೆಯಾದ ಯಡ್ರಾಮಿ ತಾಲೂಕಿನ ಜನತೆಗೆ ಅಭಿನಂದನೆ ಸಲ್ಲಿಸಲು ಇದುವರೆಗೆ ಬಂದಿಲ್ಲ ಈ ತಾಲೂಕಿನಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ ಹಾಗೂ ಸರಿಯಾದ ರಸ್ತೆಗಳಿಲ್ಲ ಸುಸಜ್ಜಿತವಾದ ಆಸ್ಪತ್ರೆಗಳಿಲ್ಲ ಅಷ್ಟೇ ಅಲ್ಲದೆ ಆಸ್ಪತ್ರೆಗಳಿದ್ದರೂ ಸರಿಯಾದ ಸಿಬ್ಬಂದಿ ವ್ಯವಸ್ಥೆ ಇಲ್ಲ ಈ ತಾಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿ ತಾಲೂಕಿನ ರೈತರು ಕಂಗೆಟ್ಟು ಹೋಗಿದ್ದಾರೆ ಹಾಗೂ ಜೆಜೆಎಮ್ ಯೋಜನೆ ಅಡಿಯಲ್ಲಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿರುವದಿಲ್ಲ ಇದಕ್ಕೆ ಸಂಬಂಧಪಟ್ಟ ಶಾಸಕರು ಎಲ್ಲಿ ಕಾಣೆಯಾಗಿ ಹೋಗಿದ್ದಾರೆ ಎಂದು ಗ್ರಾಮಸ್ಥರಾದ ಪರಶುರಾಮ ದಂಡಗುಲ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ