ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಕ್ಷೇತ್ರದಲ್ಲಿ ಸಾಧನೆಗೈದ ಅಮರೇಗೌಡ ಮಲ್ಲಾಪೂರ ಅವರಿಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಸ್ವಾಗತಾರ್ಹ:ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು

ಕೊಪ್ಪಳ:ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ವಿಜೇತರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರು ನಡೆದಾಡುವ ದೇವರು ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಶ್ರೀಗಳನ್ನು ನಿನ್ನೆ ಭೇಟಿ ಮಾಡಿ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ಕೊಪ್ಪಳದ ಪರಮ ಪೂಜ್ಯರಾದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮಾತನಾಡಿ ಉತ್ತರ ವಲಯದ ಪರಿಸರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಮರೇಗೌಡ ಮಲ್ಲಾಪೂರ ಅವರ ಕಾರ್ಯವನ್ನು ಗುರುತಿಸಿ ಕರ್ನಾಟಕ ಸರ್ಕಾರ ಪರಿಸರ ರಾಜ್ಯ ಪ್ರಶಸ್ತಿ ನೀಡಿರುವುದು ಸ್ವಾಗತಾರ್ಹ,ಸರ್ಕಾರ ಇಂಥಹ ಕಾರ್ಯದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು,ಜಗತ್ತಿಗೆ ಪ್ರಕೃತಿ ಮಾತೆಯ ಕೊಡುಗೆ ಅಪಾರವಾದದ್ದು, ಪ್ರಕೃತಿಮಾತೆಯನ್ನು ನಾವುಗಳೆಲ್ಲರೂ ಉಳಿಸಿ ಬೆಳಸಿದರೆ ಪ್ರಕೃತಿ ಮಾತೆಯು ನಮ್ಮನ್ನು ಜೀವನದುದ್ದಕ್ಕೂ ಸಲಹುತ್ತಾಳೆ.
ಇಂತಹ ಒಂದು ಕಾರ್ಯದಲ್ಲಿ ಕರ್ನಾಟಕದ ಉತ್ತರ ವಲಯದಲ್ಲಿ ವನಸಿರಿ ಫೌಂಡೇಶನ್ ಮೂಲಕ ತಂಡವನ್ನು ಕಟ್ಟಿಕೊಂಡು ಗಿಡಮರಗಳನ್ನು ರಕ್ಷಣೆ ಮಾಡುತ್ತಿರುವ ಸಿಂಧನೂರಿನ ಅಮರೇಗೌಡ ಮಲ್ಲಾಪೂರ ಅವರಿಗೆ ಶುಭವಾಗಲಿ ಈ ಕಾರ್ಯ ಹೀಗೆಯೇ ಸದಾಕಾಲ ನಡೆಯಲಿ ಗಿಡಮರಗಳನ್ನು ಹೆಚ್ಚು-ಹೆಚ್ಚು ಬೆಳಸಲಿ ಆ ಗವಿಸಿದ್ದೇಶ್ವನ ಆರ್ಶೀವಾದ ಸದಾ ನಿಮ್ಮ ಮೇಲಿರಲಿ ಎಂದು ಆರ್ಶೀವದಿಸಿದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸದಸ್ಯರಾದ ಅಮರಯ್ಯ ಸ್ವಾಮಿ, ಮಹಾಂತೇಶ ಉಪ್ಪಾರ,ಪ್ರೀತಮ್ ಇನ್ನಿತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ