ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣೆ ಶಿಬಿರ


ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಯಾದ ನವೋದಯ ಗ್ರಾಮೀಣ ಅಭಿವೃದ್ದಿ ಮತ್ತು ಶೈಕ್ಷಣಿಕ ಸಂಸ್ಥೆಯು ಬೆಂಗಳೂರಿನ ಪ್ರಖ್ಯಾತ ಪ್ರತಿಷ್ಠಿತ ಸಪ್ತಗಿರಿ ಆಸ್ಪತ್ರೆ ಅವರ ಸಹಯೋಗದೊಂದಿಗೆ 25.06.2023 ರಂದು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಈ ಶಿಬಿರವನ್ನು ಎಲ್ಲರೊಂದಿಗೆ ಸಸಿ ನೆಡುವುದರ ಮೂಲಕ ಚಾಲನೆ ನೀಡಲಾಯಿತು.ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸುಮಾರು 250 ಕ್ಕೂ ಹೆಚ್ಚು ಅನಾರೋಗ್ಯ ಪೀಡಿತ ಶಿಬಿರಾರ್ಥಿಗಳು ಭಾಗವಹಿಸಿದ್ದರು.ಇದರಲ್ಲಿ ವಯೋವೃದ್ಧರು,ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು ಶಿಬಿರದೊಳಗೆ ನರರೋಗಕ್ಕೆ,ಥೈರಾಯಿಡ್,ಕೀಲು ನೋವು , ಸಂಧಿವಾತ,ಸ್ತ್ರೀ ರೋಗ ಕಿಡ್ನಿ ವೈಫಲ್ಯಕ್ಕೆ ಅಸ್ತಮಾ,ECG,ಶುಗರ್,BP ಇನ್ನೂ ಇತರ ಸಾಮಾನ್ಯ ಕಾಯಿಲೆಗಳಿಗೆ ನುರಿತ ವೈದ್ಯರು ಉಚಿತ ಆರೋಗ್ಯ ತಪಾಸಣಾ ಮಾಡಿದರು ಜೊತೆಗೆ ಸಂಬಂದಿಸಿದ ಹಾಗೆ ಮಾತ್ರೆಗಳನ್ನು ಸಹ ನೀಡಿದರು ಆಪರೇಶನ್ ಹಂತದ ದೊಡ್ಡ ಚಿಕಿತ್ಸೆಗಾಗಿ ಬೆಂಗಳೂರು ತಮ್ಮ ಸಪ್ತಗಿರಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿ ತಮ್ಮ ಚಿಕಿತ್ಸೆಗೆ ಸಹಕರಿಸುತ್ತೇವೆ ಎಂದರು.ಈ ಸಂದರ್ಭದಲ್ಲಿ ಸಪ್ತಗಿರಿ ಆಸ್ಪತ್ರೆ ಯ ವೈದ್ಯಾಧಿಕಾರಿಗಳಾದ ಸಚಿನ,ಅಭಿಷೇಕ್,ಶ್ರೀನಿವಾಸ ಮತ್ತು ನಿಂಗರಾಜು ಮತ್ತು ಭರತ್ ವಿನಯ್ ಪ್ರವೀಣ ಮತ್ತು ಪ್ರಸಾದ್ ಮತ್ತು ಸಂಸ್ಥೆಯ ಅಧ್ಯಕ್ಷರನ್ನು ಒಳಗೊಂಡಂತೆ ಎಲ್ಲಾ ಪದಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮದ ಹಿರಿಯರು ಮತ್ತು ಯುವಕ ಮುಖಂಡರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ