ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆಯಲ್ಲಿನ ಕುಂದು ಕೊರತೆಗಳ ಬಗ್ಗೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಾಲಾಭಿವೃದ್ಧಿ ಸಮಿತಿಯಿಂದ ತಾಲೂಕಿನ ಸರ್ಕಾರಿ ಶಾಲೆಯಲ್ಲಿರುವ ಹಲವಾರು ಕುಂದು ಕೊರತೆಗಳ ಬಗ್ಗೆ ತಾಲೂಕಿನ ಸಿಎಂಸಿ ಕಮಿಟಿಯ ಸದಸ್ಯರು ಮತ್ತು ಅಧ್ಯಕ್ಷರು ಇಂದು ಮಾನ್ಯ ದಂಡಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ತಾಲ್ಲೂಕಿನ ಹಲವಾರು ಶಾಲೆಗಳಲ್ಲಿ ಹಾಗೂ ಮಾದಾಪುರ ಗ್ರಾಮದ ಶಾಲೆಯಲ್ಲಿ ಕಟ್ಟಡಗಳು ಇಲ್ಲದೆ ದೇವಸ್ಥಾನದ ಉಗ್ರಾಣದಲ್ಲಿ ಶಿಕ್ಷಕರು ಪಾಠ ನಿರ್ವಹಿಸುತ್ತಿದ್ದು ಹಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ ಹಾಗಾಗಿ ತಕ್ಷಣವೆ ಶಿಕ್ಷಕರನ್ನು ನೇಮಕ ಮಾಡಬೇಕು.
ಹೊನ್ನಾಳಿ ತಾಲೂಕಿನ ಒಂದೇ ಶಾಲೆಯಲ್ಲಿ 10 ರಿಂದ 20 ವರ್ಷ ಅವಧಿಯಿಂದ ಒಂದೇ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತಲಿದ್ದು ಇಂಥವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು
ಮತ್ತೆ ಕೆಲವು ಶಿಕ್ಷಕರು ಶಾಲೆಗೆ ಬಾರದೆ ಬಿ ಓ ಆಫೀಸ್ ನಲ್ಲಿ ಕುಳಿತು ರಾಜಕೀಯ ಮಾಡುತ್ತಿದ್ದಾರೆ ಇಂಥವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ವಾಹಿನಿ ಜೊತೆ ಮಾತನಾಡಿದರು.
ಈ ಸಂದರ್ಭದಲ್ಲಿ ಮಾನ್ಯ ತಹಶಿಲ್ದಾರ ತಿರುಪತಿ ಪಾಟೀಲ ದೂರವಾಣಿ ಮೂಲಕ ಬಿಇಒ ಅವರನ್ನು ಸಂಪರ್ಕಿಸಿ ಅಂತಹ ಶಿಕ್ಷಕರ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ,ತಾಲೂಕು ಕಾರ್ಯದರ್ಶಿ ಕೆ ಬಿ ಸತೀಶ್ ಬನ್ನಿಕೋಡ್, ರಮೇಶ್ ಎ.ಕೆ,ಸತೀಶ್, ಸವಿತಮ್ಮ ಇನ್ನೂ ಹಲವಾರು ಸದಸ್ಯರು ಇದ್ದರು.
ವರದಿ-ಪ್ರಭಾಕರ ಡಿ.ಎಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ