ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಮರ ಶ್ರೀ ಆಲದ ಮರಕ್ಕೆ ಮಾನವಿ ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿಗಳಾದ ಸುರೇಶ ಅಲಮೇಲು ಭೇಟಿ

ಸಿಂಧನೂರು ನಗರದ ಅಮರ ಶ್ರೀ ಆಲದ ಮರಕ್ಕೆ ಮಾನವಿ ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿಗಳಾದ ಸುರೇಶ ಅಲಮೇಲು ಭೇಟಿ ನೀಡಿ ವನಸಿರಿ ಫೌಂಡೇಶನ್ ತಂಡದ ಕಾರ್ಯಕ್ಕೆ ಪ್ರಶಂಶೆ ವ್ಯಕ್ತಪಡಿಸಿದರು.

ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಭೇಟಿ ನೀಡಿದ ಮಾನವಿ ವಲಯ ಅರಣ್ಯ ಅಧಿಕಾರಿಗಳಾದ ಸುರೇಶ ಅಲಮೇಲು ಅವರು ಮಾತನಾಡಿ ವನಸಿರಿ ಫೌಂಡೇಶನ್ ಪರಿಸರ ರಕ್ಷಣೆ, ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ.ಈ ಕಾರ್ಯದ ಮೂಲಕ ಸಾರ್ವಜನಿಕರಲ್ಲಿ ಪರಿಸರ ಕಾಳಜಿ ಮೂಡಿಸುತ್ತಿದೆ ಇದು ಒಳ್ಳೆಯ ಬೆಳವಣಿಗೆ. ನಮ್ಮ ಅರಣ್ಯ ಇಲಾಖೆಯಿಂದ ಮಾಡುವ ಕಾರ್ಯಗಳನ್ನು ಅಮರೇಗೌಡ ಮಲ್ಲಾಪೂರ ಅವರು ತಮ್ಮ ವನಸಿರಿ ಫೌಂಡೇಶನ್ ಮೂಲಕ ಮಾಡುತ್ತಿದ್ದಾರೆ ಅವರಿಗೆ ನಮ್ಮ ಇಲಾಖೆಯ ವತಿಯಿಂದ ಸಂಪೂರ್ಣವಾಗಿ ಸದಾಕಾಲ ಬೆಂಬಲಾಗಿ ನಿಲ್ಲುತ್ತೇವೆ ಸದ್ಯ ಇದೀಗ ನಮ್ಮ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ ಮಳೆ ತಡವಾಗಿ ಆರಂಭಿಸಿದ್ದರಿಂದ ಇಲಾಖೆಯಲ್ಲಿ ಸಸಿಗಳನ್ನು ನೀಡುತ್ತಿದ್ದಿಲ್ಲ ಈಗ ಮಳೆ ಪ್ರಾರಂಭವಾಗಿದೆ ಸಾರ್ವಜನಿಕರು,ರೈತರು ಸಸಿಗಳನ್ನು ತೆಗೆದುಕೊಂಡು ಹೋಗಲು ಸಸಿಗಳನ್ನು ನೀಡಲಾಗುತ್ತದೆ ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಅಮರೇಗೌಡ ಮಲ್ಲಾಪೂರ ಹಾಗೂ ವನಸಿರಿ ಫೌಂಡೇಶನ್ ಸದಸ್ಯರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ