ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವನಸಿರಿ ಫೌಂಡೇಶನ್ ಕಾರ್ಯ ತುಂಬಾ ಶ್ಲಾಘನೀಯ:ಡಾ.ತಾನಾಜಿ ಕಲ್ಯಾಣಕರ್

ವನಸಿರಿ ಫೌಂಡೇಶನ್ ಮಸ್ಕಿ ವತಿಯಿಂದ ನಿನ್ನೆ ರಾಯಚೂರಿನ ಸೋಮನಾಥ ಆಸ್ಪತ್ರೆ ವೈದ್ಯರಾದ ಡಾ.ತಾನಾಜಿ ಕಲ್ಯಾಣಕರ್ ಅವರಿಗೆ ವೈದ್ಯರ ದಿನಾಚರಣೆ ಅಂಗವಾಗಿ ಸಸಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ತಾನಾಜಿ ಕಲ್ಯಾಣಕರ್ ಅವರು ವನಸಿರಿ ಫೌಂಡೇಶನ್ ಜಿಲ್ಲೆಯಲ್ಲಿ ಪರಿಸರಕ್ಕಾಗಿ ಹಗಲಿರುಳು ಶ್ರಮಿಸುತ್ತಿದೆ ನಾನು ದಿನಾಲೂ ನೋಡುತ್ತಿದ್ದೇನೆ,ಆಲದ ಮರಕ್ಕೆ ಮರುಜೀವ ನೀಡಿದ್ದು,ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಸಿಗಳನ್ನು ನೆಟ್ಟು ವನಮಹೋತ್ಸವ ಆಚರಣೆ ಮಾಡುತ್ತಿರುವುದು, ಬೇಸಿಗೆಯಲ್ಲಿ ಪಕ್ಷಿಗಳಿಗೆ ಆಹಾರ ಮತ್ತು ನೀರುಣಿಸುತ್ತಿರುವುದು,ವೈದ್ಯರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡುವುದು ಹೀಗೆ ಹತ್ತು ಹಲವು ಕಾರ್ಯಗಳನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಬೆಳವಣಿಗೆ.ಇಂದು ಅವರು ನಮ್ಮ ಆಸ್ಪತ್ರೆಗೆ ಬಂದು ನಮಗೆ ವೈದ್ಯರ ದಿನಾಚರಣೆಯ ಶುಭಕೋರಿರುವುದು ತುಂಬಾ ಸಂತೋಷದಾಯಕ ಅವರ ಕಾರ್ಯ ಯಶಸ್ವಿಯಾಗಿ ನಡೆಯಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ,ಆಸ್ಪತ್ರೆಯ ವೈದ್ಯರಾದ ಡಾ ಕಪಿಲ್ ಕಲ್ಯಾಣಕರ್, ಶಿವುಲೀಲಾ,ಫಾತಿಮಾ,ರುಕ್ಮಿಣಿ,ಪ್ರಮೋದ್,ರಘು, ಮೋಹನ್ ಕುಮಾರ್,ಸುದರ್ಶನ,ಶಕುಂತಲಾ, ಶ್ರೀದೇವಿ,ಜಯಲಕ್ಷ್ಮಿ,ಆಂಜಿನೇಯ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ