ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪ್ರಯೋಜನ ಇಲ್ಲದ ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಗ್ರಾಮಸ್ಥರ ಅಗ್ರಹ

ಹನೂರು:ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಉಪಯೋಗಕ್ಕೆ ಬಾರದಂತೆ ಕೆಟ್ಟು ನಿoತಿದೆ ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ ಇದರಿಂದ ಗ್ರಾಮದ ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.ಈ ಬಗ್ಗೆ ಗ್ರಾಮದ ಜನರನ್ನು ವಿಚಾರಿಸಿದಾಗ ಕೆಟ್ಟು ನಿಂತು 2 ವರ್ಷವೇ ಕಳೆದಿದೆ ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತವಾಗಲಿ ಅಥವಾ ಸಂಬಂದಿಸಿದ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಅವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಈ ಸೌಲಭ್ಯದಿಂದ ವಂಚಿತವಾಗಿದ್ದೇವೆ.
ಸರ್ಕಾರವು ಗ್ರಾಮೀಣ ಜನತೆಯ ಆರೋಗ್ಯ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿ ಮಾಡಿದ್ದೂ ಬಳಕೆಗೆ ಬಾರದಿರುವುದು ದುರದೃಷ್ಟಕರವಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿಯು ಕೂಡಾ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರೂ.ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು,ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ