ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರಿಯಾಗಿ ತಲುಪದ ಕಾಲುವೆ ನೀರು,ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ,ಪಾಲಬಾವಿ,ಸುಲ್ತಾನಪುರ, ಹಂದಿಗುoದ ಹಾಗೂ ಕಪ್ಪಲಗುದ್ದಿ ಗ್ರಾಮಗಳಿಗೆ ಘಟಪ್ರಭಾ ಎಡದಂಡೆ ಕಾಲುವೆಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ಜನ ರೈತ ಸಂಘದ ಮುಖಂಡರು ಮುಗಳಖೋಡ ಕ್ರಾಸ್ ಬಳಿ ಜತ್ತ- ಜಾoಬೊಟಿ ರಸ್ತೆಯನ್ನು ತಡೆಹಿಡಿದು ಟಾಯರ್‌ಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಹಾರೂಗೇರಿಯ ಪೊಲೀಸ್ ಠಾಣಾಧಿಕಾರಿ ಗಿರಮಲೣಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಪ್ರತಿಭಟನಾ ನಿರತ ರೈತರ ಮನವೊಲಿಸಲು ಪ್ರಯತ್ನಿಸಿದರು ಆದರೂ ಪಟ್ಟು ಬಿಡದ ರೈತರು ಪ್ರತಿಭಟನೆ ಹಿಂಪಡೆಯದೆ,ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು ಹಿಡಕಲ್ ಡ್ಯಾಂ ನಿಂದ ಜನಜಾನುವಾರುಗಳಿಗಾಗಿ ಬಿಡುಗಡೆ ಮಾಡಿರುವ ನೀರನ್ನು ಅಲ್ಲಲ್ಲಿ ನೀರೆತ್ತುವ ಯಂತ್ರಗಳ ಮೂಲಕ ಕಳುವು ಮಾಡುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದವು. ಪ್ರತಿಭಟನೆಯಲ್ಲಿ ನಾಲ್ಕೈದು ಹಳ್ಳಿಗಳ ರೈತ ಸಂಘದ ಮುಖಂಡರು,ರೈತರು ಭಾಗಿಯಾಗಿದ್ದರು.
ವರದಿ-ಉಮೇಶ್ ಯರಡತ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ