ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿಯ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.
ಹನೂರು ತಾಲ್ಲೂಕಿನ ಕಗ್ಗಲಗುಂದಿ ಹಾಗೂ ಕಂಚಗಳ್ಳಿ ಗ್ರಾಮದಲ್ಲಿ ಮನುಷ್ಯರ ಮೇಲೆ ದಾಳಿ ಮಾಡಿ ಆತಂಕ ಮೂಡಿಸಿದ್ದ ಚಿರತೆ ಕಳೆದ ವಾರ ಸಿದ್ದೇಶ್ವರ ಬೆಟ್ಟದಲ್ಲಿ ಓಡಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ವೀಕ್ಷಣೆ ಮಾಡಿದ್ದ ಅರಣ್ಯ ಇಲಾಖೆಯು ಕಾರ್ಯಾಚರಣೆ ಕೈಗೊಂಡಿದ್ದು ಆಯಕಟ್ಟಿನ ಆರು ಕಡೆಗಳಲ್ಲಿ ಬೋನುಗಳನ್ನು ಇರಿಸಿದರು ಇದರೊಟ್ಟಿಗೆ 30 ಕ್ಯಾಮೆರಾ ಗಳನ್ನು ಅಳವಡಿಸಿದ್ದರು.
ಭಾನುವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿರುವ ಬಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯು ನೋಡಿದ ತಕ್ಷಣ ಮಾಹಿತಿ ಕೊಟ್ಟಿದ್ದಾರೆ ಈ ಮಾಹಿತಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಬೋನು ಇರಿಸಿದ್ದಂತ ಸ್ಥಳಕ್ಕೆ ದೌಡಾಯಿಸಿ,ಚಿರತೆಯನ್ನು ವೀಕ್ಷಣೆ ಮಾಡಿದರು.ಈ ಚಿರತೆಯು ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯೆ ಅಥವಾ ಇಲ್ಲವೇ ಎಂಬುದನ್ನು ತಿಳಿಯಬೇಕಾಗಿದೆ.
ಇನ್ನು ಮುಂದೆಯಾದರೂ ಅರಣ್ಯ ಇಲಾಖೆಯವರು ಮನುಷ್ಯ ಪ್ರಾಣಗಳ ಕಾಪಾಡುವ ಹಿತ ದೃಷ್ಟಿಯಿಂದ ಚಿರತೆಗಳು ದಾಳಿ ಮಾಡುವ ಮೊದಲು ಬೋನುಗಳನ್ನು ಇರಿಸಿ ಪ್ರಾಣಗಳನ್ನು ಉಳಿಸಬೇಕೆಂದು ಗ್ರಾಮಸ್ಥರ ಮನವಿ.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ