ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

16 ವರ್ಷದ ಮಗನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ 25 ಸಾವಿರ ರೂ.ದಂಡ:ಭದ್ರಾವತಿ ಜೆ ಎಂ ಎಫ್ ಸಿ ನ್ಯಾಯಾಲಯ ತೀರ್ಪು

ಭದ್ರಾವತಿ:ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಯೋರ್ವರಿಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಭದ್ರಾವತಿ ನಗರದ ಜನ್ನಾಪುರ ಬಡಾವಣೆ ನಿವಾಸಿ ಶ್ರೀಕಾಂತ್ (45) ಎಂಬುವರೆ,16 ವರ್ಷ ವಯೋಮಾನದ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿ ದಂಡ ಹಾಕಿಸಿಕೊಂಡ ತಂದೆ.
ಜುಲೈ 19 ರಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ ಪಿ ಎಸ್ ಐ ರಮೇಶ್ ರವರು ವಾಹನಗಳ ತಪಾಸಣಾ ಕಾರ್ಯ ನಡೆಸುತ್ತಿದ್ದರು ಈ ವೇಳೆ ಬಾಲಕನೋರ್ವ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದು,ಆತನನ್ನು ನಿಲ್ಲಿಸಿ ವಾಹನಗಳ ದಾಖಲಾತಿ ಪರಿಶೀಲಿಸಿದ್ದರು ಆತನ ಬಳಿ ವಾಹನ ಚಾಲನಾ ಪರವಾನಿಗೆಯಿಲ್ಲದಿರುವುದು ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕನಾಗಿರುವುದು ಬೆಳಕಿಗೆ ಬಂದಿತ್ತು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ,ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿದ ನಂತರ,ಪ್ರಕರಣದ ಕುರಿತಂತೆ ನ್ಯೂ ಟೌನ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು ಪ್ರಕರಣವನ್ನು ಗಮನಿಸಿದ ನ್ಯಾಯಾಧೀಶರು ಜನ್ನಾಪುರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿದ್ದ ತಪ್ಪಿಗೆ 25 ಸಾವಿರ ರೂ.ದಂಡ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ