ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿ ನಗರದಲ್ಲಿ ನಿರಂತರ ಮಳೆ:ಜನಜೀವನ ಅಸ್ತವ್ಯಸ್ತ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಮಳೆರಾಯನ ಆಗಮನಕ್ಕಾಗಿ ಮುಗಿಲಿನತ್ತ ಮುಖ ಮಾಡಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಹೌದು ಇನ್ನೇನು ಮಳೆಗಾಲ ಬಂತು ಬಿತ್ತನೆ ಕಾರ್ಯ ಮಾಡಿ ಭೂಮಿತಾಯಿಯ ಮಡಿಲಿನಿಂದ ಒಂದಿಷ್ಟು ಬೆಳೆ ಪಡೆಯೋಣ ಎನ್ನುವಷ್ಟರಲ್ಲಿ ಮಳೆರಾಯ ಕೈಕೊಟ್ಟು ಆಗಾಗ ನಾಲ್ಕು ಹನಿ ಉದುರಿಸಿ ಭೂಮಿ ತಂಪಾಗಿಸಿದ್ದ. ಆದರೂ ಬೆಳೆ ಬೆಳೆಯುವುದಕ್ಕೆ ಸಾಕಾಗದಷ್ಟು ಮಳೆಯಾಗದಿದ್ದರಿಂದ ಕೆಲವೊಬ್ಬ ರೈತ ಬಿತ್ತನೆ ಮಾಡಿದ್ದರೆ ಇನ್ನೂ ಕೆಲವೊಬ್ಬರು ಬಿತ್ತನೆ ಮಾಡದೇ ಹಾಗೇ ಇದ್ದರು ಇದೇನಪ್ಪ ಇದು ಮಳೆ ಬರುತ್ತೋ ಇಲ್ವೋ ಅಥವಾ ಬರಗಾಲ ಆಗುತ್ತೋ ಅಂತ ಹಣೆಗೆ ಕೈ ಹಚ್ಚಿಕೊಂಡು ಕುಳಿತಿದ್ದ ರೈತನಿಗೀಗ ಸಂತಸ ತಂದಿದೆ. ಕಲಬುರಗಿ,ಅಫಜಲಪುರ,ಚಿತ್ತಾಪುರ, ಕಾಳಗಿ,ಆಳಂದ ಸೇರಿಂದಂತೆ ಇನ್ನಿತರ ತಾಲೂಕುಗಳಲ್ಲಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯಿಂದಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ, ಕೆಲಸಕ್ಕಾಗಿ ಆಫೀಸಿಗೆ ಹೋಗುವವರು,ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಒಟ್ಟಿನಲ್ಲಿ ಕಣ್ಮರೆಯಾಗಿದ್ದ ಮಳೆರಾಯ ಎಲ್ಲರ ಮೊಗದಲ್ಲೂ ಮಂದಹಾಸ ಮೂಡಿಸಿದ್ದಾನೆ ಅಂತಲೇ ಹೇಳಬಹುದು.

ವರದಿ: ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ