ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾರ್ ರ ನೇತೃತ್ವದಲ್ಲಿ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಇಂಡಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ದಿನಾಂಕ 22/7/2023 ರಂದು ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ತಹಸಿಲ್ದಾರರಾದ ನಾಗಯ್ಯ ಹಿರೇಮಠ ಇವರು ಮಿನಿ ವಿಧಾನಸೌಧದ ಸುತ್ತಲೂ ಸಂಪೂರ್ಣವಾಗಿ ವೀಕ್ಷಿಸಿದರು ಇದರೊಂದಿಗೆ ಸಾರ್ವಜನಿಕರು ಮಿನಿ ವಿಧಾನಸೌಧಕ್ಕೆ ಬರುವುದು ಸಹಜ ಆದರೆ ಬಂದ ನಂತರ ತಮ್ಮಲ್ಲಿರುವ ಕ್ಯಾರಿಬ್ಯಾಗ್ ಆಗಿರಬಹುದು ಇನ್ನಿತರ ಯಾವುದೇ ವಸ್ತುಗಳನ್ನು ಎಲ್ಲಿ ಬೇಕಾದರೂ ಅವುಗಳನ್ನು ಎಸೆಯಬಾರದು ಡಸ್ಟ್ ಬಿನ್ ಗಳಲ್ಲಿ ಹಾಕಬೇಕು ಮತ್ತು ವಾಹನ ಮಾಲೀಕರು ಸಹ ತಮಗೆ ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲುಗಡೆ ಮಾಡಬೇಕು ಇದಕ್ಕೆಲ್ಲ ಸಾರ್ವಜನಿಕರ ಸಹಕಾರ ಅವಶ್ಯಕತೆ ಇದೆ ಯಾವುದೇ ಕಾರ್ಯಾಲಯಕ್ಕೆ ಹೋದರೆ ಅಲ್ಲಿನ ನಿಯಮಗಳ ಅನುಸಾರ ನಡೆದುಕೊಳ್ಳುವುದು ನಮ್ಮ ಕರ್ತವ್ಯ ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು. ಇಂದು ಮಿನಿ ವಿಧಾನಸೌಧವು ಸ್ವಚ್ಛ ಕನ್ನಡಿಯಂತೆ ಕಂಗೊಳಿಸುತ್ತದೆ ತಹಸಿಲ್ದಾರರಾದ ನಾಗಯ್ಯ ಹಿರೇಮಠ ಇವರು ಸ್ವತಹ ಮುಂದೆ ನಿಂತು ಪ್ರತಿಯೊಂದು ಭಾಗವನ್ನು ಸ್ವಚ್ಛಗೊಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕ ಪರವಾಗಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಇವರಿಗೆ ಧನ್ಯವಾದಗಳು ಅರ್ಪಿಸೋಣ.

ವರದಿ-ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ