ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನಾಚರಣೆ.

ಚಿಟಗುಪ್ಪ: ಆಡಳಿತದಲ್ಲಿ ಅತ್ಯಂತ ನಿಷ್ಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡು ದೇಶಕ್ಕೆ ಮಾದರಿಯಾದವರು ಸರ್ದಾರ್ ವಲ್ಲಭಭಾಯ್ ಪಟೇಲ್ ರವರು. ಅವರ ಈ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಸ್ಮರಣೆ ಮಾಡಿಕೊಂಡು,ಗೌರವ ನಮನಗಳು ಸಲ್ಲಿಸುತ್ತೇವೆ ಎಂದು ಸಾಹಿತಿ, ಪತ್ರಕರ್ತ, ಸಂಚಾಲಕ ಸಂಗಮೇಶ ಎನ್ ಜವಾದಿ ನುಡಿದರು.

ನಗರದ ಪ್ರಗತಿ ಕೇಂದ್ರದಲ್ಲಿ ಜರುಗಿದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆಧುನಿಕ ಅಖಿಲ ಭಾರತ ಸೇವೆಗಳ ವ್ಯವಸ್ಥೆಯನ್ನು ಸ್ಥಾಪಿಸಿದ್ದಕ್ಕಾಗಿ ಅವರು ಭಾರತದ ನಾಗರಿಕ ಸೇವಕರ ಪೋಷಕ ಸಂತ ಹಾಗೂ ಭಾರತದ ಏಕೀಕರಣ ನೇತಾರ ಎಂದೂ ಕರೆಯಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಗತಿ ಕೇಂದ್ರದ ಮಾತಾಜಿ ಶೀಲಾದೇವಿ ಪಾಟೀಲ ಮಾತನಾಡಿ ಸರ್ದಾರ್ ವಲ್ಲಭಭಾಯ್ ಪಟೇಲರ ಆದರ್ಶ ಜೀವನ ನಮ್ಮೆಲ್ಲರಿಗೂ ಮಾರ್ಗದರ್ಶನ ಹಾಗೂ ಪ್ರೇರಣೆಯಾಗಿದೆ. ಇವರ ನೀತಿಯ ತತ್ವದ ಮೇಲೆ ನಾವೆಲ್ಲರೂ ಸಾಗಬೇಕೆಂದರು.

ಸಂಗೀತಾ ಪಂಚಾಳ ಸ್ವಾಗತಿಸಿ,ನಿರೂಪಿಸಿದರು.
ಜಗದೇವಿ ಮೇತ್ರೇ, ಸರಸ್ವತಿ ಝರೇಪ್ಪ, ಮತ್ತು ಶಶಿಕಲಾ ಚವ್ಹಾಣ ಸೇರಿದಂತೆ ಮಹನೀಯರು ಹಾಗೂ ಮುದ್ದು ಮಕ್ಕಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ