ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಗೆ ಬೆಳೆ ಹಾನಿ,ಮನೆ ಬಿದ್ದವರಿಗೆ 5 ಲಕ್ಷದ ಮನೆ ಕೂಡಲೇ ಮಂಜೂರು ಮಾಡಿ:ಮಲ್ಲಿಕಾರ್ಜುನ್ ಮರತೂರಕರ್

ಕಲಬುರಗಿ:ಮುಂಗಾರು ಮಳೆ ಹೋಗಿ ಬಿತ್ತಿದ ಬೀಜ ಹುಟ್ಟಿ ಕಮರಿ ಹೋದ ಸಂಕಟ ಈಗ ಅತಿಯಾದ ಮಳೆಯಿಂದ ಸಾಲ ಮಾಡಿ ಬಿತ್ತಿದ ಬೆಳೆ ಈಗ ಹುಟ್ಟಿ ನಿರುಪಾಲಾರದ ಇನ್ನೊಂದು ಸಂಕಟ ಇದ್ದ ಭೂಮಿ ನೀರಿಗೆ ಕೊಚ್ಚಿ ಹೋಗುತ್ತಿರುವುದು ಮತ್ತೊಂದು ಸಂಕಟದಲ್ಲಿ ಬದುಕುತ್ತಿರುವ ರೈತನಿಗೆ ಬೆಳೆ ಹಾನಿ ಹಾಗೂ ಪರಿಹಾರ ಕೊಡುವ ಮುಖಾಂತರ ಸ್ಪಂದಿಸಬೇಕು ಹಾಗೂ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅನೇಕ ಮನೆಗಳು ಕುಸಿದು ಬಿದ್ದು ವಾಸಿಸಲು ಮನೆ ಕಳೆದುಕೊಂಡ ನಿರಾಶ್ರಿತರಿಗೆ ತಕ್ಷಣ 5 ಲಕ್ಷದ ರೂ.ಮನೆಗಳನ್ನು ಮಂಜೂರು ಮಾಡಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಮಾಜಿ ಸಿಎಂ ಬೊಮ್ಮಾಯಿ ಅವರ ಸರಕಾರ ಇದ್ದಾಗ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಮನೆಗಳನ್ನು ಮತ್ತು ಬೆಳೆ ಹಾನಿಯಾದ ರೈತರಿಗೆ ತಕ್ಷಣ ಬೆಳೆ ಹಾನಿಯನ್ನು ಮಂಜೂರು ಮಾಡಿದ ಮಾದರಿಯಲ್ಲಿಯೇ ರಾಜಕೀಯ ಮಾಡದೆ ರೈತರಿಗೆ ಮತ್ತು ಮನೆ ಕಳೆದುಕೊಂಡ ನಿರಾಶ್ರಿತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದರು.
ಮಳೆಯಿಂದ ಬೆಳೆ ಸಂಪೂರ್ಣ ನಾಶಗೊಂಡು ಮನೆ ಆಸ್ತಿ ಪಾಸ್ತಿ ಹಾಳಾಗಿವೆ ಇವುಗಳನ್ನು ಸಮೀಕ್ಷೆ ಮಾಡಲು ಬಾರದ ಮಂತ್ರಿಮಂಡಲ ಹಾಗೂ ಅಧಿಕಾರಿಗಳ ವರ್ಗಕ್ಕೆ ಸಂಕಷ್ಟದಲ್ಲಿ ನೊಂದ ಜನರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಕೂಡಲೇ ಸರ್ಕಾರ ಇವುಗಳಿಗೆ ಸ್ಪಂದಿಸದೆ ಹೋದರೆ ಸರಕಾರದ ವಿರುದ್ಧ ಹೋರಾಟ ಅನಿವಾರ್ಯ ಎಂದರು.
-ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ