ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಧಾರಾಕಾರ ಮಳೆಯಿಂದ ಮನೆ ಕುಸಿತ:ಶಾಸಕರೇ,ಅಧಿಕಾರಿಗಳೇ ಇತ್ತಕಡೆ ಒಮ್ಮೆ ಗಮನ ಕೊಡಿ

ಯಾದಗಿರಿ ಜಿಲ್ಲೆಯ ವಡಗೇರಾ:ಕಳೆದ ಮೂರು ನಾಲ್ಕು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಡಗೇರಾ ತಾಲೂಕಿನ ಬೆಂಡಬೆಂಬಳಿ ಗ್ರಾಮದಲ್ಲಿ ಸುಮಾರು ಮನೆಗಳು ಕುಸಿದು ಬಿದ್ದಿವೆ ಇದರಿಂದ ನಾವುಗಳು ತೀವ್ರ ಸಂಕಷ್ಟ ಜೀವನ ನಡೆಸುತ್ತಿದ್ದೇವೆ ಎಂದು ಬೆಂಡಬೆಂಬಳಿ ಗ್ರಾಮದ ಮಹಿಳೆ ರಾಜೇಶ್ವರಿ ಸಾಲಿಮಠ ಅವರು ಅಳಲು ತೋಡಿಕೊಂಡರು.
ಮನೆ ಕುಸಿದು ಬಿದ್ದಿರುವುದರಿಂದ ಸಂಬಂಧಿಕರ ಮನೆ ಹಾಗೂ ಇನ್ನಿತರ ಅಕ್ಕ ಪಕ್ಕದವರ ಮನೆಯಲ್ಲಿ ವಾಸಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಮನೆಯಲ್ಲಿ ಇರುವ ಕಾಳು ಕಡಿ ಎಲ್ಲಾ ಸಾಮಾನುಗಳು ಹಾಳಾಗಿವೆ ದನಕರುಗಳನ್ನು ಕೂಡಾ ಹೊರಗಡೆ ಮಳೆಯಲ್ಲಿ ಕಟ್ಟಿದ್ದೇವೆ.
ವಡಗೇರಾ ತಾಲೂಕ ದಂಡಾಧಿಕಾರಿಗಳು ಇತ್ತಕಡೆ ಗಮನ ಹರಿಸಿದೆ ಗ್ರಾಮಸ್ಥರ ಜೀವನದ ಜೊತೆ ಚೆಲ್ಲಾಟ ಆಡುತ್ತಾ ಇದ್ದಾರೆ ಯಾವ ಒಬ್ಬ ಅಧಿಕಾರಿಯೂ ಭೇಟಿ ನೀಡಿಲ್ಲ ಮಾನ್ಯ ಜಿಲ್ಲಾಧಿಕಾರಿಗಳು ಬೆಂಡಬೆಂಬಳಿ ಗ್ರಾಮಸ್ಥರ ನೆರವಿಗೆ ಬರುತ್ತಾರಾ ಎಂದು ಗ್ರಾಮಸ್ಥರು ಕಾಯುವಂತಾಗಿದೆ.
ಶಾಸಕರೇ ಬೆಂಡಬೆಂಬಳಿ ಗ್ರಾಮಸ್ಥರ ಮನೆಗಳು ಕುಸಿದು ಬಿದ್ದಿವೆ ಈಗಲಾದರೂ ಗ್ರಾಮಸ್ಥರ ನೆರವಿಗೆ ಬನ್ನಿ ಮನೆ ಕುಸಿದು ಬಿದ್ದವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಎಂದು ಗ್ರಾಮಸ್ಥರ ಅಳಲು ತೋಡಿಕೊಂಡರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ