ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರುದ್ರೇಶ್ ಬಿ.ಸಿಂಗನಾಳ ನೇಮಕ ಮಾಡುವಂತೆ ಸಚಿವರಿಗೆ ಮನವಿ ಪತ್ರ


ಕಾರಟಗಿ : ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಪಟ್ಟಣದ ಅವರ ಗೃಹ ಕಚೇರಿಗೆ ನೂರಾರು ಕುರಿಗಾಹಿಗಳು ಭೇಟಿ ನೀಡಿ ಸಚಿವರಿಗೆ ಕಂಬಳಿ ಹಾಕಿ ಸನ್ಮಾನಿಸಿ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ಬಳಿಕ ಕುರಿಗಾಹಿಗಳು ಮಾತನಾಡಿ ರುದ್ರೇಶ್ ಅವರು ಕುರಿಗಳ ಬಗ್ಗೆ ಕುರಿಗಾಹಿಗಳ ಕಷ್ಟ-ನಷ್ಟವನ್ನು ತಿಳಿದವರು. ಜತೆಗೆ ಯುವಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಕಾರ್ಯ ಕಾರ್ಯ ನಿರ್ವಹಿಸಿದ್ದು ಜನರ ಕುಂದು ಕೊರತೆಗಳ ಸಮಸ್ಯೆಗಳಿಗೆ ಸ್ಪಂದನೆ ನೀಡಿ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದಾರೆ, ಹಾಗೂ ಕುರಿಗಾಹಿಗಳು ಯವುದಾದರೂ ತೊಂದರೆಯಲ್ಲಿ ಸಿಲುಕಿಕೊಂಡರೆ ಕೂಡಲೇ ಸ್ಪಂದನೆ ಮಾಡುತ್ತಾರೆ. ಹೈನುಗಾರಿಕೆ ಮತ್ತು ಕುರಿಗಳ ಸಾಗಾಣಿಕೆ ಅನುಭವಿಗಳಾಗಿದ್ದು, ಹೀಗಾಗಿ ಅಂತ ವ್ಯಕ್ತಿಯನ್ನು ನಿಗಮಕ್ಕೆ ಆಯ್ಕೆ ಮಾಡುವುದರಿಂದ ಕುರಿಗಾಹಿಗಳಿಗೆ ಅನುಕೂಲವಾಗಲಿದೆ. ಅವರ ಸೇವೆಯನ್ನು ರಾಜ್ಯಾದ್ಯಂತ ಮಾಡಲು ಅವಕಾಶ ನೀಡಬೇಕೆಂದು ತಿಳಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಬೂದಗುಂಪಾ, ಹಿರಿಯ ಮುಖಂಡರು, ಕಾರ್ಯಕರ್ತರು ಸೇರಿ ನೂರಾರು ಕುರಿಗಾಹಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ