ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ಪರಿಸರ ಸೇವೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು:ಡಾ.ದೊಡ್ಡಬಸವ

ಸಿಂಧನೂರಿನ ಬಸವ ಮಕ್ಕಳ ಆಸ್ಪತ್ರೆಯ ವೈದ್ಯರಾದ ದೊಡ್ಡಬಸವ ಅವರು ಇಂದು ಸಿಂಧನೂರಿನ ವನಸಿರಿ ಫೌಂಡೇಶನ್ ಕಾರ್ಯಾಲಯಕ್ಕೆ ಭೇಟಿ ನೀಡಿ ಕರ್ನಾಟಕ ಸರಕಾರದಿಂದ ರಾಜ್ಯ ಮಟ್ಟದ ಪರಿಸರ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಮರೇಗೌಡ ಮಲ್ಲಾಪೂರ ಅವರನ್ನು ಸನ್ಮಾನಿಸಿ ಗೌರವಿಸಿದರು.ಪರಿಸರ ಸೇವೆಗೆ ಸಹಕಾರವಾಗಲಿ ಎಂದು 5 ಸಾವಿರ ರೂಪಾಯಿಗಳನ್ನು ವನಸಿರಿ ಫೌಂಡೇಶನ್ ಗೆ ದೇಣಿಗೆ ನೀಡಿ

ಮಾತನಾಡಿ ಪ್ರತಿಯೊಬ್ಬರೂ ಪರಿಸರ ಕಾಳಜಿ ಬೆಳಸಿಕೊಳ್ಳಬೇಕು ನಮ್ಮ ಸಿಂಧನೂರಿನಲ್ಲಿ ಅಮರೇಗೌಡ ಮಲ್ಲಾಪೂರ ಅವರು ಅತ್ಯಂತ ಹೆಚ್ಚು ಪರಿಸರ ಕಾಳಜಿ ಹೊಂದಿದ್ದು ಮತ್ತು ಈ ಕಾಳಜಿಯನ್ನು ಕರ್ನಾಟಕ ಸರ್ಕಾರ ಗುರುತಿಸಿ ಜೂನ್ 5 ವಿಶ್ವ ಪರಿಸರ ದಿನದಂದು ಪರಿಸರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.ತಾಲೂಕಿನ ಅನೇಕ ಪರಿಸರ ಪ್ರೇಮಿಗಳು ಆಲದ ಮರಕ್ಕೆ ದಾನಿಗಳ ರೂಪದಲ್ಲಿ ಸಹಾಯ ಸಹಕಾರಿ ನೀಡಿದಕ್ಕೆ ಇಂದು ಆಲದ ಮರ ರಕ್ಷಣೆಗೊಂಡು ಸುಂದರವಾಗಿ ಬೆಳೆದು ತಾಲೂಕಿನ ಜನತೆಗೆ ಶುದ್ಧಗಾಳಿ ನೀಡುತ್ತಿದೆ.ಇಂತಹ ಪರಿಸರ ಪ್ರೇಮಿಗಳು ಇನ್ನಷ್ಟು ಹೆಚ್ಚಿನ ಪರಿಸರ ಕಾಳಜಿಯುಳ್ಳ ಕಾರ್ಯಗಳನ್ನು ದಿನನಿತ್ಯ ಕೈಗೊಳ್ಳಲಿ ಎಂದು ನಾನು ಇಂದು ವನಸಿರಿ ಫೌಂಡೇಶನ್ ತಂಡಕ್ಕೆ 5 ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ ಇದು ಇನ್ನೊಬ್ಬರಿಗೆ ಪ್ರೇರಣೆಯಾಗಲಿ,ಪ್ರತಿಯೊಬ್ಬರೂ ಪರಿಸರ ರಕ್ಷಣೆ ಮಾಡುವ ಇಂತಹ ಪರಿಸರ ಪ್ರೇಮಿಗಳಿಗೆ ಸಹಾಯ ಸಹಕಾರ ನೀಡುವಂತಾಗಲಿ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ