ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾರ್ಮಿಕ ಇಲಾಖೆಯ ಅಧಿಕಾರಿಗಳಿಂದ ಹನೂರು ಪಟ್ಟಣದಲ್ಲಿ ಬಾಲ ಕಾರ್ಮಿಕರ ತಪಾಸಣೆ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಬಾಲಕಾರ್ಮಿಕರ ನಿರ್ಮೂಲನೆ ಯೋಜನೆ ಇಲಾಖೆಯ ವತಿಯಿಂದ ಬಂದಂತಹ ಅಧಿಕಾರಿಗಳ ತಂಡವು ಹನೂರು ಪಟ್ಟಣದ ಆಟೋಮೊಬೈಲ್ಸ್, ಗ್ಯಾರೇಜ್,ಬಾರ್,ಅಂಗಡಿ ಮುಕ್ಕಟ್ಟು ಮುಂತಾದ ಜಾಗಗಳಲ್ಲಿ ಬಾಲಕಾರ್ಮಿಕರು ಇರಬಹುದು ಎಂದು ತಪಾಸಣೆ ನಡೆಸಿದರು.ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಆದ ಪ್ರಸಾದ್ ರವರು ಮಾತನಾಡಿ ಬಾಲ್ಯವ್ಯವಸ್ಥೆಯು ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ ನೈತಿಕವಾಗಿ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ ಪ್ರತಿಯೊಂದು ಮಗುವಿಗೂ ಶಿಕ್ಷಣ ಕಡ್ಡಾಯವಾಗಿ ನೀಡಬೇಕು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡು ಕೆಲಸ ಮಾಡಿಸುವುದು ಕಾನೂನು ಬಾಹಿರ ಅಪರಾಧವಾಗಿದೆ . ಮಗು ಶಿಕ್ಷಣವನ್ನು ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದರೆ ಅಂತವರ ಬಗ್ಗೆ ಸಹಾಯವಾಣಿ ಸಂಖ್ಯೆ(1098) ಮಾಹಿತಿಯನ್ನು ನೀಡಬಹುದು ಎಂಬುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳಾದ ಮಹೇಶ್ ಕಾರ್ಮಿಕ ಇಲಾಖೆಯ ಸಿಬ್ಬಂದಿ,ಸಿದ್ದ ಶೆಟ್ಟಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚಂದ್ರಶೇಖರ್ ಪೊಲೀಸ್ ಸಿಬ್ಬಂದಿಯವರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ